ಮಟಮಟ ಮಧ್ಯಾಹ್ನವೇ ಶಾಲಾ ಮಕ್ಕಳ ಅಪಹರಣಕ್ಕೆ ಯತ್ನಿಸಿದ ಕಿಡಿಗೇಡಿಗಳು: ಮುಸುಕುಧಾರಿಗಳ ಕೃತ್ಯಕ್ಕೆ ಬೆಚ್ಚಿಬಿದ್ದ ಚಿಕ್ಕತುಮಕೂರು ಗ್ರಾಮಸ್ಥರು

 

ಊಟದ ಸಮಯದಲ್ಲಿ ಶಾಲಾ ಮಕ್ಕಳು ಹೊರಗೆ ಬಂದಿದ್ದು, ಈ ವೇಳೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಮಕ್ಕಳನ್ನು ಅಪಹರಿಸಲು ಯತ್ನಿಸಿರುವ ಘಟನೆ ತಾಲೂಕಿನ ಚಿಕ್ಕತುಮಕೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

4ನೇ ತರಗತಿಯ ಗೌತಮ್ ಹಾಗೂ 1ನೇ ತರಗತಿಯ ಗುರುದತ್ ಎಂಬ ವಿದ್ಯಾರ್ಥಿಗಳನ್ನ ಕಿಡ್ನ್ಯಾಪ್ ಮಾಡಲು ಯತ್ನಿಸಿರುವ ಖದೀಮರು. ಗೌತಮ್ ಹಾಗೂ ಗುರುದತ್ ಇಬ್ಬರೂ ಸಹೋದರರು. ಅಪರಿಸುವ ವೇಳೆ ಮಕ್ಕಳು ವಿರೋಧಿಸಿದಾಗ ಅವರನ್ನ ಅಲ್ಲಿಯೇ ಬಿಟ್ಟು ಪರಾರಿಯಾಗಿರುವ ದುಷ್ಕರ್ಮಿಗಳು. ಶಾಲಾ ಮಕ್ಕಳನ್ನ ಅಪಹರಿಸಿದ ಪ್ರಕರಣ ಇಡೀ ಗ್ರಾಮವೇ ಬೆಚ್ಚು ಬೀಳುವಂತೆ ಮಾಡಿದೆ.

ಘಟನೆ ವಿವರ

ಇಂದು ಚಿಕ್ಕತುಮಕೂರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹೊಸ ಸಮವಸ್ತ್ರವನ್ನ ವಿತರಣೆ ಮಾಡಲಾಗಿತ್ತು, ಶಾಲೆಯ ವಿದ್ಯಾರ್ಥಿಗಳಾಗಿದ್ದ ಗೌತಮ್ ಮತ್ತು ಗುರುದತ್ ತಮ್ಮ ಸಮವಸ್ತ್ರವನ್ನ ಮನೆಯಲ್ಲಿ ಇಟ್ಟು ಬರಲು ಮನೆಯತ್ತ ನಡೆದಿದ್ದಾರೆ, ಇದನ್ನೇ ಬಂಡವಾಳ ಮಾಡಿಕೊಂಡು ಅಪಹರಣಕ್ಕೆ ಹೊಂಚು ಹಾಕಿ ಕುಳಿತಿದ್ದ ಕಿಡಿಗೇಡಿಗಳು ಸಹೋದರರನ್ನ ಬಲವಂತವಾಗಿ ಬೈಕ್ ನಲ್ಲಿ ಕೂರಿಸಿಕೊಂಡು ಅಪಹರಣ ಮಾಡಲು ಯತ್ನಸಿದ್ದಾರೆ, ಆದರೆ ಗುರುದತ್ ಬಲವಾಗಿ ವಿರೋಧಿಸಿದ್ದಲ್ಲದೆ ಕಲ್ಲಿನಿಂದ ಹೊಡೆಯಲು ಮುಂದಾಗಿದ್ದಾನೆ, ಅದಲ್ಲದೇ ಗುರುದತ್ ಸಹಪಾಠಿಗಳು ಸಹ ಜೋರಾಗಿ ಕೂಗಿಕೊಂಡಾಗ ಇದರಿಂದ ಬೆದರಿದ ಅಪಹರಣಕಾರರು ಮಕ್ಕಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಪರಾರಿಯಾಗುವ ಮುನ್ನ ಪೊಲೀಸರಿಗೆ ದೂರು ನೀಡದಂತೆ ಎಚ್ಚರಿಕೆಯನ್ನು ನೀಡಿ ಹೋಗಿದ್ದಾರೆ ಎನ್ನಲಾಗಿದೆ.

ಅಪಹರಣಕ್ಕೆ ಕಾರಣ

ಅಂದಹಾಗೇ, ಗುರುದತ್ ಮತ್ತು ಗೌತಮ್ ಸಹೋದರರು ಸಿದ್ದರಾಜು ಹಾಗೂ ಶಾಂತಮ್ಮ ದಂಪತಿ ಮಕ್ಕಳು, ಈ ಸಿದ್ದರಾಜು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿದ್ದಾರೆ.

ಈ ಕುರಿತು ಅಪಹರಣಕ್ಕೆ ಒಳಗಾಗಿದ್ದ ಮಕ್ಕಳ ತಂದೆ ಸಿದ್ದರಾಜು ಮಾತನಾಡಿ, ಶಾಂತಮ್ಮ ಸಹೋದರಿ ಅನುಸೂಯ ಅವರ ಮಗನನ್ನು ನಮ್ಮ ಮನೆಯಲ್ಲೇ ಇಟ್ಟುಕೊಂಡು ಓದಿಸುತ್ತಿದ್ದೇವೆ, ಅನುಸೂಯ ಅವರು ಗಂಡನನ್ನು ಬಿಟ್ಟಿದ್ದು, ಮುನಿರಾಜು ಎಂಬ ವ್ಯಕ್ತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ಆರೋಪಿಸಿದ್ದಾರೆ.

ಈ ಮುನಿರಾಜುಗೆ ಅನುಸೂಯಳ ಮಗ ನಮ್ಮ ಮನೆಯಲ್ಲಿರುವುದು ಇಷ್ಟ ಇರಲಿಲ್ಲ, ಇದೇ ಕಾರಣಕ್ಕೆ ಇಂದು ಮುನಿರಾಜು ಅನುಸೂಯ ಅವರ ಮಗನನ್ನು ಅಪಹರಣ ಮಾಡಲು ಬಂದಿದ್ದ. ಆದರೆ ಆ ಬಾಲಕ ಸಿಗದ ಹಿನ್ನೆಲೆ ನಮ್ಮ ಮಕ್ಕಳನ್ನಾದರೂ ಅಪಹರಿಸಿ ಬೆದರಿಕೆವೊಡ್ಡಿ ಅನಸೂಯ ಮಗನನ್ನ ಕರೆದುಕೊಂಡು ಹೋಗುವ ಪ್ಲ್ಯಾನ್ ನನ್ನು ಮುನಿರಾಜು ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಸದ್ಯ ಮಕ್ಕಳು ಘಟನೆಯಿಂದ ತೀವ್ರ ಭಯಭೀತರಾಗಿದ್ದಾರೆ. ತನ್ನ ಮಕ್ಕಳನ್ನು ತಬ್ಬಿ ಕಣ್ಣೀರಿಟ್ಟ ತಾಯಿ ಶಾಂತಮ್ಮ.

ಘಟನೆಗೆ ಸಂಬಂಧಿಸಿದಂತೆ ಸಿದ್ದರಾಜು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

5 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

6 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

15 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago