ಊಟದ ಸಮಯದಲ್ಲಿ ಶಾಲಾ ಮಕ್ಕಳು ಹೊರಗೆ ಬಂದಿದ್ದು, ಈ ವೇಳೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಮಕ್ಕಳನ್ನು ಅಪಹರಿಸಲು ಯತ್ನಿಸಿರುವ ಘಟನೆ ತಾಲೂಕಿನ ಚಿಕ್ಕತುಮಕೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
4ನೇ ತರಗತಿಯ ಗೌತಮ್ ಹಾಗೂ 1ನೇ ತರಗತಿಯ ಗುರುದತ್ ಎಂಬ ವಿದ್ಯಾರ್ಥಿಗಳನ್ನ ಕಿಡ್ನ್ಯಾಪ್ ಮಾಡಲು ಯತ್ನಿಸಿರುವ ಖದೀಮರು. ಗೌತಮ್ ಹಾಗೂ ಗುರುದತ್ ಇಬ್ಬರೂ ಸಹೋದರರು. ಅಪರಿಸುವ ವೇಳೆ ಮಕ್ಕಳು ವಿರೋಧಿಸಿದಾಗ ಅವರನ್ನ ಅಲ್ಲಿಯೇ ಬಿಟ್ಟು ಪರಾರಿಯಾಗಿರುವ ದುಷ್ಕರ್ಮಿಗಳು. ಶಾಲಾ ಮಕ್ಕಳನ್ನ ಅಪಹರಿಸಿದ ಪ್ರಕರಣ ಇಡೀ ಗ್ರಾಮವೇ ಬೆಚ್ಚು ಬೀಳುವಂತೆ ಮಾಡಿದೆ.
ಇಂದು ಚಿಕ್ಕತುಮಕೂರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹೊಸ ಸಮವಸ್ತ್ರವನ್ನ ವಿತರಣೆ ಮಾಡಲಾಗಿತ್ತು, ಶಾಲೆಯ ವಿದ್ಯಾರ್ಥಿಗಳಾಗಿದ್ದ ಗೌತಮ್ ಮತ್ತು ಗುರುದತ್ ತಮ್ಮ ಸಮವಸ್ತ್ರವನ್ನ ಮನೆಯಲ್ಲಿ ಇಟ್ಟು ಬರಲು ಮನೆಯತ್ತ ನಡೆದಿದ್ದಾರೆ, ಇದನ್ನೇ ಬಂಡವಾಳ ಮಾಡಿಕೊಂಡು ಅಪಹರಣಕ್ಕೆ ಹೊಂಚು ಹಾಕಿ ಕುಳಿತಿದ್ದ ಕಿಡಿಗೇಡಿಗಳು ಸಹೋದರರನ್ನ ಬಲವಂತವಾಗಿ ಬೈಕ್ ನಲ್ಲಿ ಕೂರಿಸಿಕೊಂಡು ಅಪಹರಣ ಮಾಡಲು ಯತ್ನಸಿದ್ದಾರೆ, ಆದರೆ ಗುರುದತ್ ಬಲವಾಗಿ ವಿರೋಧಿಸಿದ್ದಲ್ಲದೆ ಕಲ್ಲಿನಿಂದ ಹೊಡೆಯಲು ಮುಂದಾಗಿದ್ದಾನೆ, ಅದಲ್ಲದೇ ಗುರುದತ್ ಸಹಪಾಠಿಗಳು ಸಹ ಜೋರಾಗಿ ಕೂಗಿಕೊಂಡಾಗ ಇದರಿಂದ ಬೆದರಿದ ಅಪಹರಣಕಾರರು ಮಕ್ಕಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಪರಾರಿಯಾಗುವ ಮುನ್ನ ಪೊಲೀಸರಿಗೆ ದೂರು ನೀಡದಂತೆ ಎಚ್ಚರಿಕೆಯನ್ನು ನೀಡಿ ಹೋಗಿದ್ದಾರೆ ಎನ್ನಲಾಗಿದೆ.
ಅಂದಹಾಗೇ, ಗುರುದತ್ ಮತ್ತು ಗೌತಮ್ ಸಹೋದರರು ಸಿದ್ದರಾಜು ಹಾಗೂ ಶಾಂತಮ್ಮ ದಂಪತಿ ಮಕ್ಕಳು, ಈ ಸಿದ್ದರಾಜು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿದ್ದಾರೆ.
ಈ ಕುರಿತು ಅಪಹರಣಕ್ಕೆ ಒಳಗಾಗಿದ್ದ ಮಕ್ಕಳ ತಂದೆ ಸಿದ್ದರಾಜು ಮಾತನಾಡಿ, ಶಾಂತಮ್ಮ ಸಹೋದರಿ ಅನುಸೂಯ ಅವರ ಮಗನನ್ನು ನಮ್ಮ ಮನೆಯಲ್ಲೇ ಇಟ್ಟುಕೊಂಡು ಓದಿಸುತ್ತಿದ್ದೇವೆ, ಅನುಸೂಯ ಅವರು ಗಂಡನನ್ನು ಬಿಟ್ಟಿದ್ದು, ಮುನಿರಾಜು ಎಂಬ ವ್ಯಕ್ತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ಆರೋಪಿಸಿದ್ದಾರೆ.
ಈ ಮುನಿರಾಜುಗೆ ಅನುಸೂಯಳ ಮಗ ನಮ್ಮ ಮನೆಯಲ್ಲಿರುವುದು ಇಷ್ಟ ಇರಲಿಲ್ಲ, ಇದೇ ಕಾರಣಕ್ಕೆ ಇಂದು ಮುನಿರಾಜು ಅನುಸೂಯ ಅವರ ಮಗನನ್ನು ಅಪಹರಣ ಮಾಡಲು ಬಂದಿದ್ದ. ಆದರೆ ಆ ಬಾಲಕ ಸಿಗದ ಹಿನ್ನೆಲೆ ನಮ್ಮ ಮಕ್ಕಳನ್ನಾದರೂ ಅಪಹರಿಸಿ ಬೆದರಿಕೆವೊಡ್ಡಿ ಅನಸೂಯ ಮಗನನ್ನ ಕರೆದುಕೊಂಡು ಹೋಗುವ ಪ್ಲ್ಯಾನ್ ನನ್ನು ಮುನಿರಾಜು ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಿದ್ದರಾಜು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…