ಮಟಮಟ ಮಧ್ಯಾಹ್ನವೇ ಶಾಲಾ ಮಕ್ಕಳ ಅಪಹರಣಕ್ಕೆ ಯತ್ನಿಸಿದ ಕಿಡಿಗೇಡಿಗಳು: ಮುಸುಕುಧಾರಿಗಳ ಕೃತ್ಯಕ್ಕೆ ಬೆಚ್ಚಿಬಿದ್ದ ಚಿಕ್ಕತುಮಕೂರು ಗ್ರಾಮಸ್ಥರು

 

ಊಟದ ಸಮಯದಲ್ಲಿ ಶಾಲಾ ಮಕ್ಕಳು ಹೊರಗೆ ಬಂದಿದ್ದು, ಈ ವೇಳೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಮಕ್ಕಳನ್ನು ಅಪಹರಿಸಲು ಯತ್ನಿಸಿರುವ ಘಟನೆ ತಾಲೂಕಿನ ಚಿಕ್ಕತುಮಕೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

4ನೇ ತರಗತಿಯ ಗೌತಮ್ ಹಾಗೂ 1ನೇ ತರಗತಿಯ ಗುರುದತ್ ಎಂಬ ವಿದ್ಯಾರ್ಥಿಗಳನ್ನ ಕಿಡ್ನ್ಯಾಪ್ ಮಾಡಲು ಯತ್ನಿಸಿರುವ ಖದೀಮರು. ಗೌತಮ್ ಹಾಗೂ ಗುರುದತ್ ಇಬ್ಬರೂ ಸಹೋದರರು. ಅಪರಿಸುವ ವೇಳೆ ಮಕ್ಕಳು ವಿರೋಧಿಸಿದಾಗ ಅವರನ್ನ ಅಲ್ಲಿಯೇ ಬಿಟ್ಟು ಪರಾರಿಯಾಗಿರುವ ದುಷ್ಕರ್ಮಿಗಳು. ಶಾಲಾ ಮಕ್ಕಳನ್ನ ಅಪಹರಿಸಿದ ಪ್ರಕರಣ ಇಡೀ ಗ್ರಾಮವೇ ಬೆಚ್ಚು ಬೀಳುವಂತೆ ಮಾಡಿದೆ.

ಘಟನೆ ವಿವರ

ಇಂದು ಚಿಕ್ಕತುಮಕೂರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹೊಸ ಸಮವಸ್ತ್ರವನ್ನ ವಿತರಣೆ ಮಾಡಲಾಗಿತ್ತು, ಶಾಲೆಯ ವಿದ್ಯಾರ್ಥಿಗಳಾಗಿದ್ದ ಗೌತಮ್ ಮತ್ತು ಗುರುದತ್ ತಮ್ಮ ಸಮವಸ್ತ್ರವನ್ನ ಮನೆಯಲ್ಲಿ ಇಟ್ಟು ಬರಲು ಮನೆಯತ್ತ ನಡೆದಿದ್ದಾರೆ, ಇದನ್ನೇ ಬಂಡವಾಳ ಮಾಡಿಕೊಂಡು ಅಪಹರಣಕ್ಕೆ ಹೊಂಚು ಹಾಕಿ ಕುಳಿತಿದ್ದ ಕಿಡಿಗೇಡಿಗಳು ಸಹೋದರರನ್ನ ಬಲವಂತವಾಗಿ ಬೈಕ್ ನಲ್ಲಿ ಕೂರಿಸಿಕೊಂಡು ಅಪಹರಣ ಮಾಡಲು ಯತ್ನಸಿದ್ದಾರೆ, ಆದರೆ ಗುರುದತ್ ಬಲವಾಗಿ ವಿರೋಧಿಸಿದ್ದಲ್ಲದೆ ಕಲ್ಲಿನಿಂದ ಹೊಡೆಯಲು ಮುಂದಾಗಿದ್ದಾನೆ, ಅದಲ್ಲದೇ ಗುರುದತ್ ಸಹಪಾಠಿಗಳು ಸಹ ಜೋರಾಗಿ ಕೂಗಿಕೊಂಡಾಗ ಇದರಿಂದ ಬೆದರಿದ ಅಪಹರಣಕಾರರು ಮಕ್ಕಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಪರಾರಿಯಾಗುವ ಮುನ್ನ ಪೊಲೀಸರಿಗೆ ದೂರು ನೀಡದಂತೆ ಎಚ್ಚರಿಕೆಯನ್ನು ನೀಡಿ ಹೋಗಿದ್ದಾರೆ ಎನ್ನಲಾಗಿದೆ.

ಅಪಹರಣಕ್ಕೆ ಕಾರಣ

ಅಂದಹಾಗೇ, ಗುರುದತ್ ಮತ್ತು ಗೌತಮ್ ಸಹೋದರರು ಸಿದ್ದರಾಜು ಹಾಗೂ ಶಾಂತಮ್ಮ ದಂಪತಿ ಮಕ್ಕಳು, ಈ ಸಿದ್ದರಾಜು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿದ್ದಾರೆ.

ಈ ಕುರಿತು ಅಪಹರಣಕ್ಕೆ ಒಳಗಾಗಿದ್ದ ಮಕ್ಕಳ ತಂದೆ ಸಿದ್ದರಾಜು ಮಾತನಾಡಿ, ಶಾಂತಮ್ಮ ಸಹೋದರಿ ಅನುಸೂಯ ಅವರ ಮಗನನ್ನು ನಮ್ಮ ಮನೆಯಲ್ಲೇ ಇಟ್ಟುಕೊಂಡು ಓದಿಸುತ್ತಿದ್ದೇವೆ, ಅನುಸೂಯ ಅವರು ಗಂಡನನ್ನು ಬಿಟ್ಟಿದ್ದು, ಮುನಿರಾಜು ಎಂಬ ವ್ಯಕ್ತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ಆರೋಪಿಸಿದ್ದಾರೆ.

ಈ ಮುನಿರಾಜುಗೆ ಅನುಸೂಯಳ ಮಗ ನಮ್ಮ ಮನೆಯಲ್ಲಿರುವುದು ಇಷ್ಟ ಇರಲಿಲ್ಲ, ಇದೇ ಕಾರಣಕ್ಕೆ ಇಂದು ಮುನಿರಾಜು ಅನುಸೂಯ ಅವರ ಮಗನನ್ನು ಅಪಹರಣ ಮಾಡಲು ಬಂದಿದ್ದ. ಆದರೆ ಆ ಬಾಲಕ ಸಿಗದ ಹಿನ್ನೆಲೆ ನಮ್ಮ ಮಕ್ಕಳನ್ನಾದರೂ ಅಪಹರಿಸಿ ಬೆದರಿಕೆವೊಡ್ಡಿ ಅನಸೂಯ ಮಗನನ್ನ ಕರೆದುಕೊಂಡು ಹೋಗುವ ಪ್ಲ್ಯಾನ್ ನನ್ನು ಮುನಿರಾಜು ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಸದ್ಯ ಮಕ್ಕಳು ಘಟನೆಯಿಂದ ತೀವ್ರ ಭಯಭೀತರಾಗಿದ್ದಾರೆ. ತನ್ನ ಮಕ್ಕಳನ್ನು ತಬ್ಬಿ ಕಣ್ಣೀರಿಟ್ಟ ತಾಯಿ ಶಾಂತಮ್ಮ.

ಘಟನೆಗೆ ಸಂಬಂಧಿಸಿದಂತೆ ಸಿದ್ದರಾಜು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago