ದೊಡ್ಡಬಳ್ಳಾಪುರ : ಜಾನುವಾರುಗಳಿಗೆ ಮೇವು ತರುವ ವೇಳೆ ಮಹಿಳೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ ಯಾಗಿರುವ ಘಟನೆ ಡಿ.5ರ ಶುಕ್ರವಾರ ಮಧ್ಯಾಹ್ನ ಸುಮಾರು 12:30 ಗಂಟೆಯಲ್ಲಿ ಮಧುರೆ ಹೋಬಳಿಯ ಮದಗೊಂಡನಹಳ್ಳಿಯಲ್ಲಿ ನಡೆದಿದೆ.
ಲಕ್ಷಮ್ಮ (40)ಚಿನ್ನದ ಸರ ಕಳೆದುಕೊಂಡ ಮಹಿಳೆ.
ಡಿ.5ರ ಶುಕ್ರವಾರ ಮಧ್ಯಾಹ್ನದ ವೇಳೆ ಹಸುಗಳಿಗೆ ಹುಲ್ಲು ಕೊಯ್ದುಕೊಂಡು ಮನೆಗೆ ವಾಪಾಸ್ ಬರುವ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯನ್ನು ಅಡ್ಡಗಟ್ಟಿ ಚಾಕು ತೋರಿಸಿ ಚಿನ್ನದ ಮಾಂಗಲ್ಯ, ದಪ್ಪನೆಯ 2 ಚಿನ್ನದ ಗುಂಡು, ಕರಿಮಣಿ ಸರದಲ್ಲಿದ್ದ ಚಿನ್ನದ ಚಿಕ್ಕ ಗುಂಡುಗಳು ಇದ್ದ 6 ಗ್ರಾಂ ತೂಕದ 40 ಸಾವಿರ ಮೌಲ್ಯದ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದಾರೆ.
ಸರ ಕದ್ದ ಕಳ್ಳನು ಲಕ್ಷ್ಮಮ್ಮನ ಮನೆ ಮುಂದೆಯೇ ಹೋಗಿದ್ದಾನೆ. ಅದನ್ನ ಕಂಡ ಲಕ್ಷ್ಮಮ್ಮ ಇವನೇ ಆ ಕಳ್ಳ ಎಂದು ಕೂಗಿಕೊಂಡಾಗ ಊರಿನವರು ಕಳ್ಳನನ್ನು ಹಟ್ಟಿಸಿಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಕಳ್ಳರು ಪರಾರಿ ಯಾಗಿದ್ದಾರೆ. ಕಳ್ಳ ನಡೆದುಕೊಂಡು ಹೋಗುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ..
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…