ದೊಡ್ಡಬಳ್ಳಾಪುರ : ಜಾನುವಾರುಗಳಿಗೆ ಮೇವು ತರುವ ವೇಳೆ ಮಹಿಳೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ ಯಾಗಿರುವ ಘಟನೆ ಡಿ.5ರ ಶುಕ್ರವಾರ ಮಧ್ಯಾಹ್ನ ಸುಮಾರು 12:30 ಗಂಟೆಯಲ್ಲಿ ಮಧುರೆ ಹೋಬಳಿಯ ಮದಗೊಂಡನಹಳ್ಳಿಯಲ್ಲಿ ನಡೆದಿದೆ.
ಲಕ್ಷಮ್ಮ (40)ಚಿನ್ನದ ಸರ ಕಳೆದುಕೊಂಡ ಮಹಿಳೆ.
ಡಿ.5ರ ಶುಕ್ರವಾರ ಮಧ್ಯಾಹ್ನದ ವೇಳೆ ಹಸುಗಳಿಗೆ ಹುಲ್ಲು ಕೊಯ್ದುಕೊಂಡು ಮನೆಗೆ ವಾಪಾಸ್ ಬರುವ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯನ್ನು ಅಡ್ಡಗಟ್ಟಿ ಚಾಕು ತೋರಿಸಿ ಚಿನ್ನದ ಮಾಂಗಲ್ಯ, ದಪ್ಪನೆಯ 2 ಚಿನ್ನದ ಗುಂಡು, ಕರಿಮಣಿ ಸರದಲ್ಲಿದ್ದ ಚಿನ್ನದ ಚಿಕ್ಕ ಗುಂಡುಗಳು ಇದ್ದ 6 ಗ್ರಾಂ ತೂಕದ 40 ಸಾವಿರ ಮೌಲ್ಯದ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದಾರೆ.
ಸರ ಕದ್ದ ಕಳ್ಳನು ಲಕ್ಷ್ಮಮ್ಮನ ಮನೆ ಮುಂದೆಯೇ ಹೋಗಿದ್ದಾನೆ. ಅದನ್ನ ಕಂಡ ಲಕ್ಷ್ಮಮ್ಮ ಇವನೇ ಆ ಕಳ್ಳ ಎಂದು ಕೂಗಿಕೊಂಡಾಗ ಊರಿನವರು ಕಳ್ಳನನ್ನು ಹಟ್ಟಿಸಿಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಕಳ್ಳರು ಪರಾರಿ ಯಾಗಿದ್ದಾರೆ. ಕಳ್ಳ ನಡೆದುಕೊಂಡು ಹೋಗುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ..
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…