ಮಟ ಮಟ ಮಧ್ಯಾಹ್ನವೇ ಚಾಕು ತೋರಿಸಿ ಮಹಿಳೆಯ ಮಾಂಗಲ್ಯದ ಕರಿಮಣಿ ಸರ ಕದ್ದು ಖತರ್ನಾಕ್ ಕಳ್ಳರು ಪರಾರಿ ..!

ದೊಡ್ಡಬಳ್ಳಾಪುರ : ಜಾನುವಾರುಗಳಿಗೆ ಮೇವು ತರುವ ವೇಳೆ ಮಹಿಳೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ ಯಾಗಿರುವ ಘಟನೆ ಡಿ.5ರ ಶುಕ್ರವಾರ ಮಧ್ಯಾಹ್ನ ಸುಮಾರು 12:30 ಗಂಟೆಯಲ್ಲಿ ಮಧುರೆ ಹೋಬಳಿಯ ಮದಗೊಂಡನಹಳ್ಳಿಯಲ್ಲಿ ನಡೆದಿದೆ.

ಲಕ್ಷಮ್ಮ (40)ಚಿನ್ನದ ಸರ ಕಳೆದುಕೊಂಡ ಮಹಿಳೆ.

ಡಿ.5ರ ಶುಕ್ರವಾರ ಮಧ್ಯಾಹ್ನದ ವೇಳೆ ಹಸುಗಳಿಗೆ ಹುಲ್ಲು ಕೊಯ್ದುಕೊಂಡು ಮನೆಗೆ ವಾಪಾಸ್ ಬರುವ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯನ್ನು ಅಡ್ಡಗಟ್ಟಿ ಚಾಕು ತೋರಿಸಿ ಚಿನ್ನದ ಮಾಂಗಲ್ಯ, ದಪ್ಪನೆಯ 2 ಚಿನ್ನದ ಗುಂಡು, ಕರಿಮಣಿ ಸರದಲ್ಲಿದ್ದ ಚಿನ್ನದ ಚಿಕ್ಕ ಗುಂಡುಗಳು ಇದ್ದ 6 ಗ್ರಾಂ ತೂಕದ 40 ಸಾವಿರ ಮೌಲ್ಯದ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದಾರೆ.

ಸರ ಕದ್ದ ಕಳ್ಳನು ಲಕ್ಷ್ಮಮ್ಮನ ಮನೆ ಮುಂದೆಯೇ ಹೋಗಿದ್ದಾನೆ. ಅದನ್ನ ಕಂಡ ಲಕ್ಷ್ಮಮ್ಮ ಇವನೇ ಆ ಕಳ್ಳ ಎಂದು ಕೂಗಿಕೊಂಡಾಗ ಊರಿನವರು ಕಳ್ಳನನ್ನು ಹಟ್ಟಿಸಿಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಕಳ್ಳರು ಪರಾರಿ ಯಾಗಿದ್ದಾರೆ. ಕಳ್ಳ ನಡೆದುಕೊಂಡು ಹೋಗುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ..

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

4 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

5 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

16 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

17 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

17 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago