ದೊಡ್ಡಬಳ್ಳಾಪುರ : ಜಾನುವಾರುಗಳಿಗೆ ಮೇವು ತರುವ ವೇಳೆ ಮಹಿಳೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ ಯಾಗಿರುವ ಘಟನೆ ಡಿ.5ರ ಶುಕ್ರವಾರ ಮಧ್ಯಾಹ್ನ ಸುಮಾರು 12:30 ಗಂಟೆಯಲ್ಲಿ ಮಧುರೆ ಹೋಬಳಿಯ ಮದಗೊಂಡನಹಳ್ಳಿಯಲ್ಲಿ ನಡೆದಿದೆ.
ಲಕ್ಷಮ್ಮ (40)ಚಿನ್ನದ ಸರ ಕಳೆದುಕೊಂಡ ಮಹಿಳೆ.
ಡಿ.5ರ ಶುಕ್ರವಾರ ಮಧ್ಯಾಹ್ನದ ವೇಳೆ ಹಸುಗಳಿಗೆ ಹುಲ್ಲು ಕೊಯ್ದುಕೊಂಡು ಮನೆಗೆ ವಾಪಾಸ್ ಬರುವ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯನ್ನು ಅಡ್ಡಗಟ್ಟಿ ಚಾಕು ತೋರಿಸಿ ಚಿನ್ನದ ಮಾಂಗಲ್ಯ, ದಪ್ಪನೆಯ 2 ಚಿನ್ನದ ಗುಂಡು, ಕರಿಮಣಿ ಸರದಲ್ಲಿದ್ದ ಚಿನ್ನದ ಚಿಕ್ಕ ಗುಂಡುಗಳು ಇದ್ದ 6 ಗ್ರಾಂ ತೂಕದ 40 ಸಾವಿರ ಮೌಲ್ಯದ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದಾರೆ.
ಸರ ಕದ್ದ ಕಳ್ಳನು ಲಕ್ಷ್ಮಮ್ಮನ ಮನೆ ಮುಂದೆಯೇ ಹೋಗಿದ್ದಾನೆ. ಅದನ್ನ ಕಂಡ ಲಕ್ಷ್ಮಮ್ಮ ಇವನೇ ಆ ಕಳ್ಳ ಎಂದು ಕೂಗಿಕೊಂಡಾಗ ಊರಿನವರು ಕಳ್ಳನನ್ನು ಹಟ್ಟಿಸಿಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಕಳ್ಳರು ಪರಾರಿ ಯಾಗಿದ್ದಾರೆ. ಕಳ್ಳ ನಡೆದುಕೊಂಡು ಹೋಗುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…