ದೊಡ್ಡಬಳ್ಳಾಪುರ : ಜಾನುವಾರುಗಳಿಗೆ ಮೇವು ತರುವ ವೇಳೆ ಮಹಿಳೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ ಯಾಗಿರುವ ಘಟನೆ ಡಿ.5ರ ಶುಕ್ರವಾರ ಮಧ್ಯಾಹ್ನ ಸುಮಾರು 12:30 ಗಂಟೆಯಲ್ಲಿ ಮಧುರೆ ಹೋಬಳಿಯ ಮದಗೊಂಡನಹಳ್ಳಿಯಲ್ಲಿ ನಡೆದಿದೆ.
ಲಕ್ಷಮ್ಮ (40)ಚಿನ್ನದ ಸರ ಕಳೆದುಕೊಂಡ ಮಹಿಳೆ.
ಡಿ.5ರ ಶುಕ್ರವಾರ ಮಧ್ಯಾಹ್ನದ ವೇಳೆ ಹಸುಗಳಿಗೆ ಹುಲ್ಲು ಕೊಯ್ದುಕೊಂಡು ಮನೆಗೆ ವಾಪಾಸ್ ಬರುವ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯನ್ನು ಅಡ್ಡಗಟ್ಟಿ ಚಾಕು ತೋರಿಸಿ ಚಿನ್ನದ ಮಾಂಗಲ್ಯ, ದಪ್ಪನೆಯ 2 ಚಿನ್ನದ ಗುಂಡು, ಕರಿಮಣಿ ಸರದಲ್ಲಿದ್ದ ಚಿನ್ನದ ಚಿಕ್ಕ ಗುಂಡುಗಳು ಇದ್ದ 6 ಗ್ರಾಂ ತೂಕದ 40 ಸಾವಿರ ಮೌಲ್ಯದ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದಾರೆ.
ಸರ ಕದ್ದ ಕಳ್ಳನು ಲಕ್ಷ್ಮಮ್ಮನ ಮನೆ ಮುಂದೆಯೇ ಹೋಗಿದ್ದಾನೆ. ಅದನ್ನ ಕಂಡ ಲಕ್ಷ್ಮಮ್ಮ ಇವನೇ ಆ ಕಳ್ಳ ಎಂದು ಕೂಗಿಕೊಂಡಾಗ ಊರಿನವರು ಕಳ್ಳನನ್ನು ಹಟ್ಟಿಸಿಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಕಳ್ಳರು ಪರಾರಿ ಯಾಗಿದ್ದಾರೆ. ಕಳ್ಳ ನಡೆದುಕೊಂಡು ಹೋಗುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ..
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…