ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಸ್ವಾಮೀಜಿಗೆ 35 ಲಕ್ಷ ದೋಖಾ ಮಾಡಿರುವ ವರ್ಷ ಹೆಸರಿನ ಮಹಿಳೆ. ಮಹಿಳೆಯ ಮಾತಿಗೆ ಮರಳಾಗಿ 35ಲಕ್ಷ ಹಣವನ್ನು ಹಂತಹಂತವಾಗಿ ಬ್ಯಾಂಕ್ ಖಾತೆಗೆ ಹಣ ಹಾಕಿ ಮೋಸ ಹೋಗಿರುವ ನೆಲಮಂಗಲದ ಕಂಬಾಳು ಮಠದ ಪೀಠಾಧಿಪತಿ ಚನ್ನವೀರ ಶಿವಾರ್ಚಾಯ ಸ್ವಾಮೀಜಿ.
2020ರಲ್ಲಿ ಫೇಸ್ಬುಕ್ ಮೂಲಕ ಸ್ವಾಮೀಜಿಗೆ ಪರಿಚಯವಾಗಿದ್ದ ವರ್ಷ ಎಂಬ ಹೆಸರಿನ ಮಹಿಳೆ. ಪರಿಚಯ ಆದ ನಂತರ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಾ ಇನ್ನಷ್ಟು ಸ್ವಾಮೀಜಿಗೆ ಮಹಿಳೆ ಹತ್ತಿರವಾಗಿ ಹಣ ಪೀಕಲು ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಆರಂಭದಲ್ಲಿ 500 ರೂ. ಮಂಜುಳ ಎಂಬ ಮಹಿಳೆಯ ಖಾತೆಗೆ ಹಣ ಪಾವತಿಸಿದ್ದ ಸ್ವಾಮೀಜಿ. ಇದೇ ಸಲುಗೆಯಿಂದ ದೊಡ್ಡ ಮಟ್ಟದ ಹಣ ಪೀಕಲು ಪ್ಲ್ಯಾನ್ ಮಾಡಿದ ಮಹಿಳೆ. ನನ್ನ ಬಳಿ 10 ಎಕರೆ ಜಮೀನು ಇದೆ, ದಾಖಲೆ ಸಮೇತ ಮಠಕ್ಕೆ ನೀಡುತ್ತೇನೆ ಎಂದು ನಂಬಿಸಿ ಬರೋಬ್ಬರಿ 35ಲಕ್ಷ ಹಣವನ್ನು ಸ್ವಾಮೀಜಿ ಬಳಿ ಪಡೆದುಕೊಂಡ ಮಹಿಳೆ.
ಹಣ ಪಡೆದುಕೊಂಡ ನಂತರ ಸ್ವಾಮೀಜಿ ಬಳಿ ನಾಟಕ ಮಾಡಲು ಶುರು ಮಾಡಿರುವ ಮಹಿಳೆ. ನನಗೆ ಹಲ್ಲೆ ಆಗಿದೆ. ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿ ಸ್ವಾಮೀಜಿಯಿಂದ ದೂರವಾಗಲೂ ಪ್ರಾರಂಭಿಸಿದ್ದಾರೆ.
ಇದನ್ನು ಖಚಿತಪಡಿಸಿಕೊಳ್ಳಲು ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ವರ್ಷ ಎಂಬ ಮಹಿಳೆ ದಾಖಲಾಗಿಲ್ಲ ಎಂಬುದು ತಿಳಿದು ಬರುತ್ತದೆ.
ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದ ಸ್ವಾಮೀಜಿ ನಾನು ಮೋಸ ಹೋಗಿದ್ದೇನೆ ಎಂದು ತಿಳಿದು ಬರುತ್ತದೆ. ನಂತರ ತಾನು ಮೋಸ ಹೋಗಿರುವ ಕುರಿತು ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸುತ್ತಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…