ಮಠಕ್ಕೆ ಜಮೀನು ನೀಡೋದಾಗಿ ಹೇಳಿ 35ಲಕ್ಷ ದೋಖಾ…!: ಮಹಿಳೆ ಮಾತಿಗೆ ಮರಳಾಗಿ ಹಣ ಕಳೆದುಕೊಂಡ ಸ್ವಾಮೀಜಿ

ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಸ್ವಾಮೀಜಿಗೆ 35 ಲಕ್ಷ ದೋಖಾ ಮಾಡಿರುವ ವರ್ಷ ಹೆಸರಿನ ಮಹಿಳೆ. ಮಹಿಳೆಯ ಮಾತಿಗೆ ಮರಳಾಗಿ 35ಲಕ್ಷ ಹಣವನ್ನು ಹಂತಹಂತವಾಗಿ ಬ್ಯಾಂಕ್ ಖಾತೆಗೆ ಹಣ ಹಾಕಿ ಮೋಸ ಹೋಗಿರುವ ನೆಲಮಂಗಲದ ಕಂಬಾಳು ಮಠದ ಪೀಠಾಧಿಪತಿ ಚನ್ನವೀರ ಶಿವಾರ್ಚಾಯ ಸ್ವಾಮೀಜಿ.

2020ರಲ್ಲಿ ಫೇಸ್‌ಬುಕ್‌ ಮೂಲಕ ಸ್ವಾಮೀಜಿಗೆ ಪರಿಚಯವಾಗಿದ್ದ ವರ್ಷ ಎಂಬ ಹೆಸರಿನ ಮಹಿಳೆ. ಪರಿಚಯ ಆದ ನಂತರ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಾ ಇನ್ನಷ್ಟು ಸ್ವಾಮೀಜಿಗೆ ಮಹಿಳೆ ಹತ್ತಿರವಾಗಿ ಹಣ ಪೀಕಲು ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಆರಂಭದಲ್ಲಿ 500 ರೂ. ಮಂಜುಳ ಎಂಬ ಮಹಿಳೆಯ ಖಾತೆಗೆ ಹಣ ಪಾವತಿಸಿದ್ದ ಸ್ವಾಮೀಜಿ. ಇದೇ ಸಲುಗೆಯಿಂದ ದೊಡ್ಡ ಮಟ್ಟದ ಹಣ ಪೀಕಲು ಪ್ಲ್ಯಾನ್ ಮಾಡಿದ ಮಹಿಳೆ. ನನ್ನ ಬಳಿ 10 ಎಕರೆ ಜಮೀನು ಇದೆ, ದಾಖಲೆ‌ ಸಮೇತ ಮಠಕ್ಕೆ ನೀಡುತ್ತೇನೆ ಎಂದು ನಂಬಿಸಿ ಬರೋಬ್ಬರಿ 35ಲಕ್ಷ ಹಣವನ್ನು ಸ್ವಾಮೀಜಿ ಬಳಿ ಪಡೆದುಕೊಂಡ ಮಹಿಳೆ.

ಹಣ ಪಡೆದುಕೊಂಡ ನಂತರ ಸ್ವಾಮೀಜಿ ಬಳಿ ನಾಟಕ ಮಾಡಲು ಶುರು ಮಾಡಿರುವ ಮಹಿಳೆ. ನನಗೆ ಹಲ್ಲೆ ಆಗಿದೆ. ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿ ಸ್ವಾಮೀಜಿಯಿಂದ ದೂರವಾಗಲೂ ಪ್ರಾರಂಭಿಸಿದ್ದಾರೆ.

ಇದನ್ನು ಖಚಿತಪಡಿಸಿಕೊಳ್ಳಲು ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ವರ್ಷ ಎಂಬ ಮಹಿಳೆ ದಾಖಲಾಗಿಲ್ಲ ಎಂಬುದು ತಿಳಿದು ಬರುತ್ತದೆ.

ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದ ಸ್ವಾಮೀಜಿ ನಾನು ಮೋಸ ಹೋಗಿದ್ದೇನೆ ಎಂದು ತಿಳಿದು‌ ಬರುತ್ತದೆ. ನಂತರ ತಾನು ಮೋಸ ಹೋಗಿರುವ ಕುರಿತು ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸುತ್ತಾರೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

7 minutes ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

3 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

22 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago