ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಸ್ವಾಮೀಜಿಗೆ 35 ಲಕ್ಷ ದೋಖಾ ಮಾಡಿರುವ ವರ್ಷ ಹೆಸರಿನ ಮಹಿಳೆ. ಮಹಿಳೆಯ ಮಾತಿಗೆ ಮರಳಾಗಿ 35ಲಕ್ಷ ಹಣವನ್ನು ಹಂತಹಂತವಾಗಿ ಬ್ಯಾಂಕ್ ಖಾತೆಗೆ ಹಣ ಹಾಕಿ ಮೋಸ ಹೋಗಿರುವ ನೆಲಮಂಗಲದ ಕಂಬಾಳು ಮಠದ ಪೀಠಾಧಿಪತಿ ಚನ್ನವೀರ ಶಿವಾರ್ಚಾಯ ಸ್ವಾಮೀಜಿ.
2020ರಲ್ಲಿ ಫೇಸ್ಬುಕ್ ಮೂಲಕ ಸ್ವಾಮೀಜಿಗೆ ಪರಿಚಯವಾಗಿದ್ದ ವರ್ಷ ಎಂಬ ಹೆಸರಿನ ಮಹಿಳೆ. ಪರಿಚಯ ಆದ ನಂತರ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಾ ಇನ್ನಷ್ಟು ಸ್ವಾಮೀಜಿಗೆ ಮಹಿಳೆ ಹತ್ತಿರವಾಗಿ ಹಣ ಪೀಕಲು ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಆರಂಭದಲ್ಲಿ 500 ರೂ. ಮಂಜುಳ ಎಂಬ ಮಹಿಳೆಯ ಖಾತೆಗೆ ಹಣ ಪಾವತಿಸಿದ್ದ ಸ್ವಾಮೀಜಿ. ಇದೇ ಸಲುಗೆಯಿಂದ ದೊಡ್ಡ ಮಟ್ಟದ ಹಣ ಪೀಕಲು ಪ್ಲ್ಯಾನ್ ಮಾಡಿದ ಮಹಿಳೆ. ನನ್ನ ಬಳಿ 10 ಎಕರೆ ಜಮೀನು ಇದೆ, ದಾಖಲೆ ಸಮೇತ ಮಠಕ್ಕೆ ನೀಡುತ್ತೇನೆ ಎಂದು ನಂಬಿಸಿ ಬರೋಬ್ಬರಿ 35ಲಕ್ಷ ಹಣವನ್ನು ಸ್ವಾಮೀಜಿ ಬಳಿ ಪಡೆದುಕೊಂಡ ಮಹಿಳೆ.
ಹಣ ಪಡೆದುಕೊಂಡ ನಂತರ ಸ್ವಾಮೀಜಿ ಬಳಿ ನಾಟಕ ಮಾಡಲು ಶುರು ಮಾಡಿರುವ ಮಹಿಳೆ. ನನಗೆ ಹಲ್ಲೆ ಆಗಿದೆ. ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿ ಸ್ವಾಮೀಜಿಯಿಂದ ದೂರವಾಗಲೂ ಪ್ರಾರಂಭಿಸಿದ್ದಾರೆ.
ಇದನ್ನು ಖಚಿತಪಡಿಸಿಕೊಳ್ಳಲು ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ವರ್ಷ ಎಂಬ ಮಹಿಳೆ ದಾಖಲಾಗಿಲ್ಲ ಎಂಬುದು ತಿಳಿದು ಬರುತ್ತದೆ.
ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದ ಸ್ವಾಮೀಜಿ ನಾನು ಮೋಸ ಹೋಗಿದ್ದೇನೆ ಎಂದು ತಿಳಿದು ಬರುತ್ತದೆ. ನಂತರ ತಾನು ಮೋಸ ಹೋಗಿರುವ ಕುರಿತು ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸುತ್ತಾರೆ.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…