ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಸ್ವಾಮೀಜಿಗೆ 35 ಲಕ್ಷ ದೋಖಾ ಮಾಡಿರುವ ವರ್ಷ ಹೆಸರಿನ ಮಹಿಳೆ. ಮಹಿಳೆಯ ಮಾತಿಗೆ ಮರಳಾಗಿ 35ಲಕ್ಷ ಹಣವನ್ನು ಹಂತಹಂತವಾಗಿ ಬ್ಯಾಂಕ್ ಖಾತೆಗೆ ಹಣ ಹಾಕಿ ಮೋಸ ಹೋಗಿರುವ ನೆಲಮಂಗಲದ ಕಂಬಾಳು ಮಠದ ಪೀಠಾಧಿಪತಿ ಚನ್ನವೀರ ಶಿವಾರ್ಚಾಯ ಸ್ವಾಮೀಜಿ.
2020ರಲ್ಲಿ ಫೇಸ್ಬುಕ್ ಮೂಲಕ ಸ್ವಾಮೀಜಿಗೆ ಪರಿಚಯವಾಗಿದ್ದ ವರ್ಷ ಎಂಬ ಹೆಸರಿನ ಮಹಿಳೆ. ಪರಿಚಯ ಆದ ನಂತರ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಾ ಇನ್ನಷ್ಟು ಸ್ವಾಮೀಜಿಗೆ ಮಹಿಳೆ ಹತ್ತಿರವಾಗಿ ಹಣ ಪೀಕಲು ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಆರಂಭದಲ್ಲಿ 500 ರೂ. ಮಂಜುಳ ಎಂಬ ಮಹಿಳೆಯ ಖಾತೆಗೆ ಹಣ ಪಾವತಿಸಿದ್ದ ಸ್ವಾಮೀಜಿ. ಇದೇ ಸಲುಗೆಯಿಂದ ದೊಡ್ಡ ಮಟ್ಟದ ಹಣ ಪೀಕಲು ಪ್ಲ್ಯಾನ್ ಮಾಡಿದ ಮಹಿಳೆ. ನನ್ನ ಬಳಿ 10 ಎಕರೆ ಜಮೀನು ಇದೆ, ದಾಖಲೆ ಸಮೇತ ಮಠಕ್ಕೆ ನೀಡುತ್ತೇನೆ ಎಂದು ನಂಬಿಸಿ ಬರೋಬ್ಬರಿ 35ಲಕ್ಷ ಹಣವನ್ನು ಸ್ವಾಮೀಜಿ ಬಳಿ ಪಡೆದುಕೊಂಡ ಮಹಿಳೆ.
ಹಣ ಪಡೆದುಕೊಂಡ ನಂತರ ಸ್ವಾಮೀಜಿ ಬಳಿ ನಾಟಕ ಮಾಡಲು ಶುರು ಮಾಡಿರುವ ಮಹಿಳೆ. ನನಗೆ ಹಲ್ಲೆ ಆಗಿದೆ. ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿ ಸ್ವಾಮೀಜಿಯಿಂದ ದೂರವಾಗಲೂ ಪ್ರಾರಂಭಿಸಿದ್ದಾರೆ.
ಇದನ್ನು ಖಚಿತಪಡಿಸಿಕೊಳ್ಳಲು ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ವರ್ಷ ಎಂಬ ಮಹಿಳೆ ದಾಖಲಾಗಿಲ್ಲ ಎಂಬುದು ತಿಳಿದು ಬರುತ್ತದೆ.
ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದ ಸ್ವಾಮೀಜಿ ನಾನು ಮೋಸ ಹೋಗಿದ್ದೇನೆ ಎಂದು ತಿಳಿದು ಬರುತ್ತದೆ. ನಂತರ ತಾನು ಮೋಸ ಹೋಗಿರುವ ಕುರಿತು ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸುತ್ತಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…