ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಸ್ವಾಮೀಜಿಗೆ 35 ಲಕ್ಷ ದೋಖಾ ಮಾಡಿರುವ ವರ್ಷ ಹೆಸರಿನ ಮಹಿಳೆ. ಮಹಿಳೆಯ ಮಾತಿಗೆ ಮರಳಾಗಿ 35ಲಕ್ಷ ಹಣವನ್ನು ಹಂತಹಂತವಾಗಿ ಬ್ಯಾಂಕ್ ಖಾತೆಗೆ ಹಣ ಹಾಕಿ ಮೋಸ ಹೋಗಿರುವ ನೆಲಮಂಗಲದ ಕಂಬಾಳು ಮಠದ ಪೀಠಾಧಿಪತಿ ಚನ್ನವೀರ ಶಿವಾರ್ಚಾಯ ಸ್ವಾಮೀಜಿ.
2020ರಲ್ಲಿ ಫೇಸ್ಬುಕ್ ಮೂಲಕ ಸ್ವಾಮೀಜಿಗೆ ಪರಿಚಯವಾಗಿದ್ದ ವರ್ಷ ಎಂಬ ಹೆಸರಿನ ಮಹಿಳೆ. ಪರಿಚಯ ಆದ ನಂತರ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಾ ಇನ್ನಷ್ಟು ಸ್ವಾಮೀಜಿಗೆ ಮಹಿಳೆ ಹತ್ತಿರವಾಗಿ ಹಣ ಪೀಕಲು ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಆರಂಭದಲ್ಲಿ 500 ರೂ. ಮಂಜುಳ ಎಂಬ ಮಹಿಳೆಯ ಖಾತೆಗೆ ಹಣ ಪಾವತಿಸಿದ್ದ ಸ್ವಾಮೀಜಿ. ಇದೇ ಸಲುಗೆಯಿಂದ ದೊಡ್ಡ ಮಟ್ಟದ ಹಣ ಪೀಕಲು ಪ್ಲ್ಯಾನ್ ಮಾಡಿದ ಮಹಿಳೆ. ನನ್ನ ಬಳಿ 10 ಎಕರೆ ಜಮೀನು ಇದೆ, ದಾಖಲೆ ಸಮೇತ ಮಠಕ್ಕೆ ನೀಡುತ್ತೇನೆ ಎಂದು ನಂಬಿಸಿ ಬರೋಬ್ಬರಿ 35ಲಕ್ಷ ಹಣವನ್ನು ಸ್ವಾಮೀಜಿ ಬಳಿ ಪಡೆದುಕೊಂಡ ಮಹಿಳೆ.
ಹಣ ಪಡೆದುಕೊಂಡ ನಂತರ ಸ್ವಾಮೀಜಿ ಬಳಿ ನಾಟಕ ಮಾಡಲು ಶುರು ಮಾಡಿರುವ ಮಹಿಳೆ. ನನಗೆ ಹಲ್ಲೆ ಆಗಿದೆ. ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿ ಸ್ವಾಮೀಜಿಯಿಂದ ದೂರವಾಗಲೂ ಪ್ರಾರಂಭಿಸಿದ್ದಾರೆ.
ಇದನ್ನು ಖಚಿತಪಡಿಸಿಕೊಳ್ಳಲು ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ವರ್ಷ ಎಂಬ ಮಹಿಳೆ ದಾಖಲಾಗಿಲ್ಲ ಎಂಬುದು ತಿಳಿದು ಬರುತ್ತದೆ.
ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದ ಸ್ವಾಮೀಜಿ ನಾನು ಮೋಸ ಹೋಗಿದ್ದೇನೆ ಎಂದು ತಿಳಿದು ಬರುತ್ತದೆ. ನಂತರ ತಾನು ಮೋಸ ಹೋಗಿರುವ ಕುರಿತು ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸುತ್ತಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…