ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಸ್ವಾಮೀಜಿಗೆ 35 ಲಕ್ಷ ದೋಖಾ ಮಾಡಿರುವ ವರ್ಷ ಹೆಸರಿನ ಮಹಿಳೆ. ಮಹಿಳೆಯ ಮಾತಿಗೆ ಮರಳಾಗಿ 35ಲಕ್ಷ ಹಣವನ್ನು ಹಂತಹಂತವಾಗಿ ಬ್ಯಾಂಕ್ ಖಾತೆಗೆ ಹಣ ಹಾಕಿ ಮೋಸ ಹೋಗಿರುವ ನೆಲಮಂಗಲದ ಕಂಬಾಳು ಮಠದ ಪೀಠಾಧಿಪತಿ ಚನ್ನವೀರ ಶಿವಾರ್ಚಾಯ ಸ್ವಾಮೀಜಿ.
2020ರಲ್ಲಿ ಫೇಸ್ಬುಕ್ ಮೂಲಕ ಸ್ವಾಮೀಜಿಗೆ ಪರಿಚಯವಾಗಿದ್ದ ವರ್ಷ ಎಂಬ ಹೆಸರಿನ ಮಹಿಳೆ. ಪರಿಚಯ ಆದ ನಂತರ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಾ ಇನ್ನಷ್ಟು ಸ್ವಾಮೀಜಿಗೆ ಮಹಿಳೆ ಹತ್ತಿರವಾಗಿ ಹಣ ಪೀಕಲು ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಆರಂಭದಲ್ಲಿ 500 ರೂ. ಮಂಜುಳ ಎಂಬ ಮಹಿಳೆಯ ಖಾತೆಗೆ ಹಣ ಪಾವತಿಸಿದ್ದ ಸ್ವಾಮೀಜಿ. ಇದೇ ಸಲುಗೆಯಿಂದ ದೊಡ್ಡ ಮಟ್ಟದ ಹಣ ಪೀಕಲು ಪ್ಲ್ಯಾನ್ ಮಾಡಿದ ಮಹಿಳೆ. ನನ್ನ ಬಳಿ 10 ಎಕರೆ ಜಮೀನು ಇದೆ, ದಾಖಲೆ ಸಮೇತ ಮಠಕ್ಕೆ ನೀಡುತ್ತೇನೆ ಎಂದು ನಂಬಿಸಿ ಬರೋಬ್ಬರಿ 35ಲಕ್ಷ ಹಣವನ್ನು ಸ್ವಾಮೀಜಿ ಬಳಿ ಪಡೆದುಕೊಂಡ ಮಹಿಳೆ.
ಹಣ ಪಡೆದುಕೊಂಡ ನಂತರ ಸ್ವಾಮೀಜಿ ಬಳಿ ನಾಟಕ ಮಾಡಲು ಶುರು ಮಾಡಿರುವ ಮಹಿಳೆ. ನನಗೆ ಹಲ್ಲೆ ಆಗಿದೆ. ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿ ಸ್ವಾಮೀಜಿಯಿಂದ ದೂರವಾಗಲೂ ಪ್ರಾರಂಭಿಸಿದ್ದಾರೆ.
ಇದನ್ನು ಖಚಿತಪಡಿಸಿಕೊಳ್ಳಲು ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ವರ್ಷ ಎಂಬ ಮಹಿಳೆ ದಾಖಲಾಗಿಲ್ಲ ಎಂಬುದು ತಿಳಿದು ಬರುತ್ತದೆ.
ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದ ಸ್ವಾಮೀಜಿ ನಾನು ಮೋಸ ಹೋಗಿದ್ದೇನೆ ಎಂದು ತಿಳಿದು ಬರುತ್ತದೆ. ನಂತರ ತಾನು ಮೋಸ ಹೋಗಿರುವ ಕುರಿತು ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸುತ್ತಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…