Categories: ಕೊಡಗು

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ ಬೆತ್ತಲೆಯಾಗಿ ಪೋಲೀಸ್ ಠಾಣೆಗೆ ಬಂದು ದೂರು ನೀಡಿದ್ದು ನಂತರ ಹನಿಟ್ರಾಪ್ ನಡೆಸಿದ ತಂಡ ಅರೆಸ್ಟ್ ಆಗಿದ್ದು ಸುದ್ದಿಯಾದ ಬೆನ್ನಲ್ಲೇ ಇದೀಗ ಬೆಚ್ಚಿಬೀಳಿಸುವ ಸುದ್ದಿ ಬೆಳಕಿಗೆ ಬಂದಿದೆ.

ಹನಿಟ್ರಾಪ್ ನಡೆಸಿದ ಮಹಿಳೆ ಮತ್ತು ಆಕೆಯ ತಂಡವನ್ನು ತೀವ್ರ ವಿಚಾರಣೆ ಮಾಡಿದಾಗ ಈ ತಂಡ ಮಡಿಕೇರಿ ನಗರದ ಅನೇಕ ಪ್ರಭಾವಿ ವ್ಯಕ್ತಿಗಳನ್ನು ಪಲ್ಲಂಗದಲ್ಲಿ ಬೆತ್ತಲಾಗಿಸಿ ಮಹಿಳೆಯೊಂದಿಗೆ ವೀಡಿಯೋ ಚಿತ್ರಿಸಿ ಬೆದರಿಕೆ ಹಾಕಿ ಲಕ್ಷ ಲಕ್ಷ ಹಣ ಪೀಕಿದ್ದಾರೆ ಎಂದು ತಿಳಿದುಬಂದಿದೆ.

ಇಂತವರ ವೈಯಕ್ತಿಕ ವಿಚಾರವಾದರೂ ಅವರನ್ನು ಬಲೆಗೆ ಬೀಳಿಸಿ, ಅವರಿಂದ ಲಕ್ಷಾಂತರ ಹಣ ಬ್ಲಾಕ್ ಮೇಲ್ ಮಾಡಿ ಗಿಟ್ಟಿಸಿದ್ದು ಪತ್ತೆ ಹಚ್ಚಿ ಮುಂದೆ ಈ ರೀತಿ ಆಗದ ಹಾಗೆ ಕಾನೂನು ಕ್ರಮ ಆಗಬೇಕಾಗಿದೆ.

ಮಡಿಕೇರಿ ಸ್ಟ್ಯಾಂಡಿಂಗ್ ಕಮಿಟಿ ಹಾಗೂ ನಗರದ ಬ್ಯಾಂಕ್ ಒಂದರ‌ ನಿರ್ದೇಕರಾಗಿರುವ ಪ್ರಭಾವಿ ವ್ಯಕ್ತಿಯೊಬ್ಬರು ಇವಳ ಬಲೆಗೆ ಬಿದ್ದು ಈ ಟೀಮ್ ಗೆ ಲಕ್ಷಾಂತರ ರೂ ಕಕ್ಕಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಖ್ಯಾತ ಗುತ್ತಿಗೆದಾರ ಹಾಗೂ ಸಮಾಜವೊಂದರ ಅಧ್ಯಕ್ಷರಾಗಿ ಐಶಾರಾಮಿ ಕಾರಿನಲ್ಲಿ ಓಡಾಡುವ ಪ್ರಭಾವಿ ವ್ಯಕ್ತಿಯನ್ನು ಬಲೆಗೆ ಕೆಡವಿ ದೊಡ್ಡ ಮೊತ್ತವನ್ನೇ ಹನಿ ಟೀಮ್ ವಸೂಲಿ ಮಾಡಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿದೆ. ಹಾಗೇಯೇ
ಸೇವಾ ಸಂಸ್ಥೆ, ಮತ್ತಿತರ ಸಂಘ ಸಂಸ್ಥೆಗಳಲ್ಲಿ ಗುರುತಿಸುಕೊಂಡಿರುವ ಉದ್ಯಮಿ,ಸರ್ಕಾರದಿಂದ ನಾಮನಿರ್ದೇಶನ ಗೊಂಡ ಸದಸ್ಯ ಹೀಗೆ ಕಾಂಗ್ರೆಸ್, ಬಿಜೆಪಿ ಎನ್ನದೆ ಪಕ್ಷಾತೀತವಾಗಿ ಬಲೆಗೆ ಹಾಕಿದ ಹನಿ ಟೀಮ್ ಭರ್ಜರಿಯಾಗಿ ಭೇಟೆಯಾಡಿ ವಸೂಲಾತಿ ಮಾಡಿರು ವ ಶಂಕೆ ವ್ಯಕ್ತವಾಗಿದೆ..

ಪೋಲೀಸರ ಬಳಿ ಎಲ್ಲಾ ವಿವರಗಳು ದೊರಕಿದ್ದು ಪ್ರಭಾವಿಗಳು ದೂರು ನೀಡದೇ ಇರುವುದರಿಂದ ಸದ್ಯಕ್ಕೆ ಕೇಸ್ ದಾಖಲಿಸಿರುವುದಿಲ್ಲ ಎಂದು ತಿಳಿದು ಬಂದಿದೆ. ಆದರೆ ಘಟನೆ ನಡೆದಿರುವುದು ಸತ್ಯ ಹಾಗೆ ಮುಂದೆ ಯಾರು ಇಂತಹ ಹನಿ ಟ್ರಾಪ್ ದಂಧೆಗೆ ಸಿಲ್ಕುದಿರಲಿ ಎಂಬುದು ಮಡಿಕೇರಿ ಜನತೆಯ ಆಶಯವಾಗಿದೆ.

Ramesh Babu

Journalist

Recent Posts

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

17 minutes ago

ನೇಣಿಗೆ ಶರಣಾಗಿರೋ ವ್ಯಕ್ತಿ

ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…

2 hours ago

” ಹೊಸ ವರುಷ ಎಂಬುದೇನಿಲ್ಲ ಅರಿತವಗೆ…”

2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…

7 hours ago

ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ಆಯೋಗ ಸಹಿಸುವುದಿಲ್ಲ-ಡಾ.ಎಲ್ ಮೂರ್ತಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…

18 hours ago

ಉನ್ನಾವೋ…..

  ಉನ್ನಾವೋ........ ಉನ್ನಾವೋ ಅತ್ಯಾಚಾರ, ಕುಲದೀಪ್ ಸಿಂಗ್ ಸೇಂಗರ್, ದೆಹಲಿ ಹೈಕೋರ್ಟ್ ಜಾಮೀನು ತೀರ್ಪು, ಭಾರತ ನ್ಯಾಯಾಂಗ ವ್ಯವಸ್ಥೆಯ ಕಾರ್ಯ…

20 hours ago

ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಅವಾಜ್… ಬಿತ್ತು ಎಫ್ ಐಆರ್..!

ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು…

21 hours ago