Categories: ಕೊಡಗು

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ ಬೆತ್ತಲೆಯಾಗಿ ಪೋಲೀಸ್ ಠಾಣೆಗೆ ಬಂದು ದೂರು ನೀಡಿದ್ದು ನಂತರ ಹನಿಟ್ರಾಪ್ ನಡೆಸಿದ ತಂಡ ಅರೆಸ್ಟ್ ಆಗಿದ್ದು ಸುದ್ದಿಯಾದ ಬೆನ್ನಲ್ಲೇ ಇದೀಗ ಬೆಚ್ಚಿಬೀಳಿಸುವ ಸುದ್ದಿ ಬೆಳಕಿಗೆ ಬಂದಿದೆ.

ಹನಿಟ್ರಾಪ್ ನಡೆಸಿದ ಮಹಿಳೆ ಮತ್ತು ಆಕೆಯ ತಂಡವನ್ನು ತೀವ್ರ ವಿಚಾರಣೆ ಮಾಡಿದಾಗ ಈ ತಂಡ ಮಡಿಕೇರಿ ನಗರದ ಅನೇಕ ಪ್ರಭಾವಿ ವ್ಯಕ್ತಿಗಳನ್ನು ಪಲ್ಲಂಗದಲ್ಲಿ ಬೆತ್ತಲಾಗಿಸಿ ಮಹಿಳೆಯೊಂದಿಗೆ ವೀಡಿಯೋ ಚಿತ್ರಿಸಿ ಬೆದರಿಕೆ ಹಾಕಿ ಲಕ್ಷ ಲಕ್ಷ ಹಣ ಪೀಕಿದ್ದಾರೆ ಎಂದು ತಿಳಿದುಬಂದಿದೆ.

ಇಂತವರ ವೈಯಕ್ತಿಕ ವಿಚಾರವಾದರೂ ಅವರನ್ನು ಬಲೆಗೆ ಬೀಳಿಸಿ, ಅವರಿಂದ ಲಕ್ಷಾಂತರ ಹಣ ಬ್ಲಾಕ್ ಮೇಲ್ ಮಾಡಿ ಗಿಟ್ಟಿಸಿದ್ದು ಪತ್ತೆ ಹಚ್ಚಿ ಮುಂದೆ ಈ ರೀತಿ ಆಗದ ಹಾಗೆ ಕಾನೂನು ಕ್ರಮ ಆಗಬೇಕಾಗಿದೆ.

ಮಡಿಕೇರಿ ಸ್ಟ್ಯಾಂಡಿಂಗ್ ಕಮಿಟಿ ಹಾಗೂ ನಗರದ ಬ್ಯಾಂಕ್ ಒಂದರ‌ ನಿರ್ದೇಕರಾಗಿರುವ ಪ್ರಭಾವಿ ವ್ಯಕ್ತಿಯೊಬ್ಬರು ಇವಳ ಬಲೆಗೆ ಬಿದ್ದು ಈ ಟೀಮ್ ಗೆ ಲಕ್ಷಾಂತರ ರೂ ಕಕ್ಕಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಖ್ಯಾತ ಗುತ್ತಿಗೆದಾರ ಹಾಗೂ ಸಮಾಜವೊಂದರ ಅಧ್ಯಕ್ಷರಾಗಿ ಐಶಾರಾಮಿ ಕಾರಿನಲ್ಲಿ ಓಡಾಡುವ ಪ್ರಭಾವಿ ವ್ಯಕ್ತಿಯನ್ನು ಬಲೆಗೆ ಕೆಡವಿ ದೊಡ್ಡ ಮೊತ್ತವನ್ನೇ ಹನಿ ಟೀಮ್ ವಸೂಲಿ ಮಾಡಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿದೆ. ಹಾಗೇಯೇ
ಸೇವಾ ಸಂಸ್ಥೆ, ಮತ್ತಿತರ ಸಂಘ ಸಂಸ್ಥೆಗಳಲ್ಲಿ ಗುರುತಿಸುಕೊಂಡಿರುವ ಉದ್ಯಮಿ,ಸರ್ಕಾರದಿಂದ ನಾಮನಿರ್ದೇಶನ ಗೊಂಡ ಸದಸ್ಯ ಹೀಗೆ ಕಾಂಗ್ರೆಸ್, ಬಿಜೆಪಿ ಎನ್ನದೆ ಪಕ್ಷಾತೀತವಾಗಿ ಬಲೆಗೆ ಹಾಕಿದ ಹನಿ ಟೀಮ್ ಭರ್ಜರಿಯಾಗಿ ಭೇಟೆಯಾಡಿ ವಸೂಲಾತಿ ಮಾಡಿರು ವ ಶಂಕೆ ವ್ಯಕ್ತವಾಗಿದೆ..

ಪೋಲೀಸರ ಬಳಿ ಎಲ್ಲಾ ವಿವರಗಳು ದೊರಕಿದ್ದು ಪ್ರಭಾವಿಗಳು ದೂರು ನೀಡದೇ ಇರುವುದರಿಂದ ಸದ್ಯಕ್ಕೆ ಕೇಸ್ ದಾಖಲಿಸಿರುವುದಿಲ್ಲ ಎಂದು ತಿಳಿದು ಬಂದಿದೆ. ಆದರೆ ಘಟನೆ ನಡೆದಿರುವುದು ಸತ್ಯ ಹಾಗೆ ಮುಂದೆ ಯಾರು ಇಂತಹ ಹನಿ ಟ್ರಾಪ್ ದಂಧೆಗೆ ಸಿಲ್ಕುದಿರಲಿ ಎಂಬುದು ಮಡಿಕೇರಿ ಜನತೆಯ ಆಶಯವಾಗಿದೆ.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

3 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

4 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

6 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

8 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

20 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

21 hours ago