ಮಡಿಕೇರಿ ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನಡೆದ ಘಟನೆ ವರದಿಯಾಗಿದೆ.
ಕಾವೇರಪ್ಪ ಮಾಲಿಕತ್ವದ ಈಶ್ವರ ನಿಲಯ ಎಂಬ ಹೋಮ್ಸ್ ಸ್ಟೇ ನಲ್ಲಿ ಹೋಮ್ಸ್ ಸ್ಟೇ ಕೇರ್ ಟೇಕರ್ನಿಂದ ರಾತ್ರಿ 2 ಗಂಟೆಯಿಂದ 4 ಗಂಟೆವರೆಗೆ ಕಿರುಕುಳ ಆಗಿದೆ ಎಂದು ದೂರು ನೀಡಲಾಗಿದೆ.
ಹೋಮ್ಸ್ ಸ್ಟೇ ಕೇರ್ ಟೇಕರ್ ಕುಮಾರ @ ಪ್ರವೀಣ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಆರೋಪಸಲಾಗಿದೆ.
ಡೋರ್ ಓಪನ್ ಮಾಡುವಂತೆ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.
ತಾಯಿ ಮಗಳು ಇಬ್ಬರೇ ಉಳಿದುಕೊಂಡಿದ್ದ ಹೋಮ್ಸ್ ಸ್ಟೇ
ಭಯವಾಗಿ ಬಾಗಿಲು ಓಪನ್ ಮಾಡದ ಪ್ರವಾಸಿ ತಾಯಿ ಮಗಳು, ಕುಡಿದು ಬಂದಿದ್ದ ಹೋಮ್ಸ್ ಸ್ಟೇ ಕೇರ್ ಟೇಕರ್ ಎಂದ ಪ್ರವಾಸಿ ಮಹಿಳೆ ಆರೋಪಿಸಿದ್ದಾರೆ.
ಇದು ನಮ್ಮ ಜೀವನದ ಅತ್ಯಂತ ಕೆಟ್ಟ ಅನುಭವ ಎಂದು ತಮ್ಮ ಅಸಮಾಧಾನವನ್ನು ಮಾಧ್ಯಮದವರೊಂದಿಗೆ ವ್ಯಕ್ತಪಡಿಸಿದ್ದಾರೆ.
ಓಪನ್ ಮಾಡದಿದ್ದಕ್ಕೆ ನಂತರ ನಾಲ್ಕು ಚಕ್ರಗಳ ಕಾರು ಪಂಕ್ಚರ್ ಮಾಡಿರುವದಾಗಿ ಅವರು ತಿಳಿಸಿದ್ದಾರೆ.
ಹೋಮ್ಸ್ ಸ್ಟೇ ಮಾಲೀಕನಿಗೆ ಕರೆ ಮಾಡಿದ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಅಂತ ಆರೋಪ ಮಾಡಿದ್ದಾರೆ.
ಬೆಂಗಳೂರು ಮೂಲದ ತಾಯಿ ಮಗಳು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಊಟಿಯಿಂದ ಕೊಡಗಿಗೆ ಬಂದು ಹೋಮ್ಸ್ ಸ್ಟೇನಲ್ಲಿ ಉಳಿದುಕೊಂಡಿದ್ದರು.
ಈ ಬಗ್ಗೆ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆ
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…