ಮಡಿಕೇರಿ ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನಡೆದ ಘಟನೆ ವರದಿಯಾಗಿದೆ.
ಕಾವೇರಪ್ಪ ಮಾಲಿಕತ್ವದ ಈಶ್ವರ ನಿಲಯ ಎಂಬ ಹೋಮ್ಸ್ ಸ್ಟೇ ನಲ್ಲಿ ಹೋಮ್ಸ್ ಸ್ಟೇ ಕೇರ್ ಟೇಕರ್ನಿಂದ ರಾತ್ರಿ 2 ಗಂಟೆಯಿಂದ 4 ಗಂಟೆವರೆಗೆ ಕಿರುಕುಳ ಆಗಿದೆ ಎಂದು ದೂರು ನೀಡಲಾಗಿದೆ.
ಹೋಮ್ಸ್ ಸ್ಟೇ ಕೇರ್ ಟೇಕರ್ ಕುಮಾರ @ ಪ್ರವೀಣ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಆರೋಪಸಲಾಗಿದೆ.
ಡೋರ್ ಓಪನ್ ಮಾಡುವಂತೆ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.
ತಾಯಿ ಮಗಳು ಇಬ್ಬರೇ ಉಳಿದುಕೊಂಡಿದ್ದ ಹೋಮ್ಸ್ ಸ್ಟೇ
ಭಯವಾಗಿ ಬಾಗಿಲು ಓಪನ್ ಮಾಡದ ಪ್ರವಾಸಿ ತಾಯಿ ಮಗಳು, ಕುಡಿದು ಬಂದಿದ್ದ ಹೋಮ್ಸ್ ಸ್ಟೇ ಕೇರ್ ಟೇಕರ್ ಎಂದ ಪ್ರವಾಸಿ ಮಹಿಳೆ ಆರೋಪಿಸಿದ್ದಾರೆ.
ಇದು ನಮ್ಮ ಜೀವನದ ಅತ್ಯಂತ ಕೆಟ್ಟ ಅನುಭವ ಎಂದು ತಮ್ಮ ಅಸಮಾಧಾನವನ್ನು ಮಾಧ್ಯಮದವರೊಂದಿಗೆ ವ್ಯಕ್ತಪಡಿಸಿದ್ದಾರೆ.
ಓಪನ್ ಮಾಡದಿದ್ದಕ್ಕೆ ನಂತರ ನಾಲ್ಕು ಚಕ್ರಗಳ ಕಾರು ಪಂಕ್ಚರ್ ಮಾಡಿರುವದಾಗಿ ಅವರು ತಿಳಿಸಿದ್ದಾರೆ.
ಹೋಮ್ಸ್ ಸ್ಟೇ ಮಾಲೀಕನಿಗೆ ಕರೆ ಮಾಡಿದ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಅಂತ ಆರೋಪ ಮಾಡಿದ್ದಾರೆ.
ಬೆಂಗಳೂರು ಮೂಲದ ತಾಯಿ ಮಗಳು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಊಟಿಯಿಂದ ಕೊಡಗಿಗೆ ಬಂದು ಹೋಮ್ಸ್ ಸ್ಟೇನಲ್ಲಿ ಉಳಿದುಕೊಂಡಿದ್ದರು.
ಈ ಬಗ್ಗೆ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆ
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…