ಮಡಿಕೇರಿ ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನಡೆದ ಘಟನೆ ವರದಿಯಾಗಿದೆ.
ಕಾವೇರಪ್ಪ ಮಾಲಿಕತ್ವದ ಈಶ್ವರ ನಿಲಯ ಎಂಬ ಹೋಮ್ಸ್ ಸ್ಟೇ ನಲ್ಲಿ ಹೋಮ್ಸ್ ಸ್ಟೇ ಕೇರ್ ಟೇಕರ್ನಿಂದ ರಾತ್ರಿ 2 ಗಂಟೆಯಿಂದ 4 ಗಂಟೆವರೆಗೆ ಕಿರುಕುಳ ಆಗಿದೆ ಎಂದು ದೂರು ನೀಡಲಾಗಿದೆ.
ಹೋಮ್ಸ್ ಸ್ಟೇ ಕೇರ್ ಟೇಕರ್ ಕುಮಾರ @ ಪ್ರವೀಣ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಆರೋಪಸಲಾಗಿದೆ.
ಡೋರ್ ಓಪನ್ ಮಾಡುವಂತೆ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.
ತಾಯಿ ಮಗಳು ಇಬ್ಬರೇ ಉಳಿದುಕೊಂಡಿದ್ದ ಹೋಮ್ಸ್ ಸ್ಟೇ
ಭಯವಾಗಿ ಬಾಗಿಲು ಓಪನ್ ಮಾಡದ ಪ್ರವಾಸಿ ತಾಯಿ ಮಗಳು, ಕುಡಿದು ಬಂದಿದ್ದ ಹೋಮ್ಸ್ ಸ್ಟೇ ಕೇರ್ ಟೇಕರ್ ಎಂದ ಪ್ರವಾಸಿ ಮಹಿಳೆ ಆರೋಪಿಸಿದ್ದಾರೆ.
ಇದು ನಮ್ಮ ಜೀವನದ ಅತ್ಯಂತ ಕೆಟ್ಟ ಅನುಭವ ಎಂದು ತಮ್ಮ ಅಸಮಾಧಾನವನ್ನು ಮಾಧ್ಯಮದವರೊಂದಿಗೆ ವ್ಯಕ್ತಪಡಿಸಿದ್ದಾರೆ.
ಓಪನ್ ಮಾಡದಿದ್ದಕ್ಕೆ ನಂತರ ನಾಲ್ಕು ಚಕ್ರಗಳ ಕಾರು ಪಂಕ್ಚರ್ ಮಾಡಿರುವದಾಗಿ ಅವರು ತಿಳಿಸಿದ್ದಾರೆ.
ಹೋಮ್ಸ್ ಸ್ಟೇ ಮಾಲೀಕನಿಗೆ ಕರೆ ಮಾಡಿದ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಅಂತ ಆರೋಪ ಮಾಡಿದ್ದಾರೆ.
ಬೆಂಗಳೂರು ಮೂಲದ ತಾಯಿ ಮಗಳು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಊಟಿಯಿಂದ ಕೊಡಗಿಗೆ ಬಂದು ಹೋಮ್ಸ್ ಸ್ಟೇನಲ್ಲಿ ಉಳಿದುಕೊಂಡಿದ್ದರು.
ಈ ಬಗ್ಗೆ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆ
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…