Categories: ಕೊಡಗು

ಮಡಿಕೇರಿ ಹೋಂ ಸ್ಟೇನಲ್ಲಿ ತಾಯಿ ಮಗಳು ತಂಗಿದ್ದ ಕೊಠಡಿಯ ಬಾಗಿಲು ಬಡಿದು ಕೇರ್ ಟೇಕರ್‌ನಿಂದ ಕಿರುಕುಳ: ಪೊಲೀಸರಿಗೆ ದೂರು

ಮಡಿಕೇರಿ ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್‌ನಿಂದ ಕಿರುಕುಳ ನಡೆದ ಘಟನೆ ವರದಿಯಾಗಿದೆ.

ಕಾವೇರಪ್ಪ‌ ಮಾಲಿಕತ್ವದ ಈಶ್ವರ ನಿಲಯ ಎಂಬ ಹೋಮ್ಸ್ ಸ್ಟೇ ನಲ್ಲಿ ಹೋಮ್ಸ್ ಸ್ಟೇ ಕೇರ್ ಟೇಕರ್‌ನಿಂದ ರಾತ್ರಿ 2 ಗಂಟೆಯಿಂದ 4 ಗಂಟೆವರೆಗೆ ಕಿರುಕುಳ ಆಗಿದೆ ಎಂದು ದೂರು ನೀಡಲಾಗಿದೆ.

ಹೋಮ್ಸ್ ಸ್ಟೇ ಕೇರ್ ಟೇಕರ್ ಕುಮಾರ @ ಪ್ರವೀಣ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಆರೋಪಸಲಾಗಿದೆ.

ಡೋರ್ ಓಪನ್ ಮಾಡುವಂತೆ ತಾಯಿ ಮಗಳಿಗೆ ಕೇರ್ ಟೇಕರ್‌ನಿಂದ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.

ತಾಯಿ ಮಗಳು ಇಬ್ಬರೇ ಉಳಿದುಕೊಂಡಿದ್ದ ಹೋಮ್ಸ್ ಸ್ಟೇ
ಭಯವಾಗಿ ಬಾಗಿಲು ಓಪನ್‌ ಮಾಡದ ಪ್ರವಾಸಿ ತಾಯಿ‌ ಮಗಳು, ಕುಡಿದು ಬಂದಿದ್ದ ಹೋಮ್ಸ್ ಸ್ಟೇ ಕೇರ್ ಟೇಕರ್ ಎಂದ ಪ್ರವಾಸಿ ಮಹಿಳೆ ಆರೋಪಿಸಿದ್ದಾರೆ.

ಇದು ನಮ್ಮ ಜೀವನದ ಅತ್ಯಂತ ಕೆಟ್ಟ ಅನುಭವ ಎಂದು ತಮ್ಮ ಅಸಮಾಧಾನವನ್ನು ಮಾಧ್ಯಮದವರೊಂದಿಗೆ ವ್ಯಕ್ತಪಡಿಸಿದ್ದಾರೆ.

ಓಪನ್‌ ಮಾಡದಿದ್ದಕ್ಕೆ ನಂತರ ನಾಲ್ಕು ಚಕ್ರಗಳ ಕಾರು ಪಂಕ್ಚರ್ ಮಾಡಿರುವದಾಗಿ ಅವರು ತಿಳಿಸಿದ್ದಾರೆ.

ಹೋಮ್ಸ್ ಸ್ಟೇ ಮಾಲೀಕನಿಗೆ ಕರೆ ಮಾಡಿದ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಅಂತ ಆರೋಪ ಮಾಡಿದ್ದಾರೆ.

ಬೆಂಗಳೂರು ಮೂಲದ ತಾಯಿ‌ ಮಗಳು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಊಟಿಯಿಂದ ಕೊಡಗಿಗೆ ಬಂದು ಹೋಮ್ಸ್ ಸ್ಟೇನಲ್ಲಿ ಉಳಿದುಕೊಂಡಿದ್ದರು.

ಈ ಬಗ್ಗೆ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆ
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

15 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

18 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

23 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago