ಮಡಿಕೇರಿ ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನಡೆದ ಘಟನೆ ವರದಿಯಾಗಿದೆ.
ಕಾವೇರಪ್ಪ ಮಾಲಿಕತ್ವದ ಈಶ್ವರ ನಿಲಯ ಎಂಬ ಹೋಮ್ಸ್ ಸ್ಟೇ ನಲ್ಲಿ ಹೋಮ್ಸ್ ಸ್ಟೇ ಕೇರ್ ಟೇಕರ್ನಿಂದ ರಾತ್ರಿ 2 ಗಂಟೆಯಿಂದ 4 ಗಂಟೆವರೆಗೆ ಕಿರುಕುಳ ಆಗಿದೆ ಎಂದು ದೂರು ನೀಡಲಾಗಿದೆ.
ಹೋಮ್ಸ್ ಸ್ಟೇ ಕೇರ್ ಟೇಕರ್ ಕುಮಾರ @ ಪ್ರವೀಣ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಆರೋಪಸಲಾಗಿದೆ.
ಡೋರ್ ಓಪನ್ ಮಾಡುವಂತೆ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.
ತಾಯಿ ಮಗಳು ಇಬ್ಬರೇ ಉಳಿದುಕೊಂಡಿದ್ದ ಹೋಮ್ಸ್ ಸ್ಟೇ
ಭಯವಾಗಿ ಬಾಗಿಲು ಓಪನ್ ಮಾಡದ ಪ್ರವಾಸಿ ತಾಯಿ ಮಗಳು, ಕುಡಿದು ಬಂದಿದ್ದ ಹೋಮ್ಸ್ ಸ್ಟೇ ಕೇರ್ ಟೇಕರ್ ಎಂದ ಪ್ರವಾಸಿ ಮಹಿಳೆ ಆರೋಪಿಸಿದ್ದಾರೆ.
ಇದು ನಮ್ಮ ಜೀವನದ ಅತ್ಯಂತ ಕೆಟ್ಟ ಅನುಭವ ಎಂದು ತಮ್ಮ ಅಸಮಾಧಾನವನ್ನು ಮಾಧ್ಯಮದವರೊಂದಿಗೆ ವ್ಯಕ್ತಪಡಿಸಿದ್ದಾರೆ.
ಓಪನ್ ಮಾಡದಿದ್ದಕ್ಕೆ ನಂತರ ನಾಲ್ಕು ಚಕ್ರಗಳ ಕಾರು ಪಂಕ್ಚರ್ ಮಾಡಿರುವದಾಗಿ ಅವರು ತಿಳಿಸಿದ್ದಾರೆ.
ಹೋಮ್ಸ್ ಸ್ಟೇ ಮಾಲೀಕನಿಗೆ ಕರೆ ಮಾಡಿದ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಅಂತ ಆರೋಪ ಮಾಡಿದ್ದಾರೆ.
ಬೆಂಗಳೂರು ಮೂಲದ ತಾಯಿ ಮಗಳು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಊಟಿಯಿಂದ ಕೊಡಗಿಗೆ ಬಂದು ಹೋಮ್ಸ್ ಸ್ಟೇನಲ್ಲಿ ಉಳಿದುಕೊಂಡಿದ್ದರು.
ಈ ಬಗ್ಗೆ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆ
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…