Categories: ಕೊಡಗು

ಮಡಿಕೇರಿ ಹೋಂ ಸ್ಟೇನಲ್ಲಿ ತಾಯಿ ಮಗಳು ತಂಗಿದ್ದ ಕೊಠಡಿಯ ಬಾಗಿಲು ಬಡಿದು ಕೇರ್ ಟೇಕರ್‌ನಿಂದ ಕಿರುಕುಳ: ಪೊಲೀಸರಿಗೆ ದೂರು

ಮಡಿಕೇರಿ ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್‌ನಿಂದ ಕಿರುಕುಳ ನಡೆದ ಘಟನೆ ವರದಿಯಾಗಿದೆ.

ಕಾವೇರಪ್ಪ‌ ಮಾಲಿಕತ್ವದ ಈಶ್ವರ ನಿಲಯ ಎಂಬ ಹೋಮ್ಸ್ ಸ್ಟೇ ನಲ್ಲಿ ಹೋಮ್ಸ್ ಸ್ಟೇ ಕೇರ್ ಟೇಕರ್‌ನಿಂದ ರಾತ್ರಿ 2 ಗಂಟೆಯಿಂದ 4 ಗಂಟೆವರೆಗೆ ಕಿರುಕುಳ ಆಗಿದೆ ಎಂದು ದೂರು ನೀಡಲಾಗಿದೆ.

ಹೋಮ್ಸ್ ಸ್ಟೇ ಕೇರ್ ಟೇಕರ್ ಕುಮಾರ @ ಪ್ರವೀಣ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಆರೋಪಸಲಾಗಿದೆ.

ಡೋರ್ ಓಪನ್ ಮಾಡುವಂತೆ ತಾಯಿ ಮಗಳಿಗೆ ಕೇರ್ ಟೇಕರ್‌ನಿಂದ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.

ತಾಯಿ ಮಗಳು ಇಬ್ಬರೇ ಉಳಿದುಕೊಂಡಿದ್ದ ಹೋಮ್ಸ್ ಸ್ಟೇ
ಭಯವಾಗಿ ಬಾಗಿಲು ಓಪನ್‌ ಮಾಡದ ಪ್ರವಾಸಿ ತಾಯಿ‌ ಮಗಳು, ಕುಡಿದು ಬಂದಿದ್ದ ಹೋಮ್ಸ್ ಸ್ಟೇ ಕೇರ್ ಟೇಕರ್ ಎಂದ ಪ್ರವಾಸಿ ಮಹಿಳೆ ಆರೋಪಿಸಿದ್ದಾರೆ.

ಇದು ನಮ್ಮ ಜೀವನದ ಅತ್ಯಂತ ಕೆಟ್ಟ ಅನುಭವ ಎಂದು ತಮ್ಮ ಅಸಮಾಧಾನವನ್ನು ಮಾಧ್ಯಮದವರೊಂದಿಗೆ ವ್ಯಕ್ತಪಡಿಸಿದ್ದಾರೆ.

ಓಪನ್‌ ಮಾಡದಿದ್ದಕ್ಕೆ ನಂತರ ನಾಲ್ಕು ಚಕ್ರಗಳ ಕಾರು ಪಂಕ್ಚರ್ ಮಾಡಿರುವದಾಗಿ ಅವರು ತಿಳಿಸಿದ್ದಾರೆ.

ಹೋಮ್ಸ್ ಸ್ಟೇ ಮಾಲೀಕನಿಗೆ ಕರೆ ಮಾಡಿದ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಅಂತ ಆರೋಪ ಮಾಡಿದ್ದಾರೆ.

ಬೆಂಗಳೂರು ಮೂಲದ ತಾಯಿ‌ ಮಗಳು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಊಟಿಯಿಂದ ಕೊಡಗಿಗೆ ಬಂದು ಹೋಮ್ಸ್ ಸ್ಟೇನಲ್ಲಿ ಉಳಿದುಕೊಂಡಿದ್ದರು.

ಈ ಬಗ್ಗೆ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆ
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago