Categories: ಕೊಡಗು

ಮಡಿಕೇರಿ ಹೋಂ ಸ್ಟೇನಲ್ಲಿ ತಾಯಿ ಮಗಳು ತಂಗಿದ್ದ ಕೊಠಡಿಯ ಬಾಗಿಲು ಬಡಿದು ಕೇರ್ ಟೇಕರ್‌ನಿಂದ ಕಿರುಕುಳ: ಪೊಲೀಸರಿಗೆ ದೂರು

ಮಡಿಕೇರಿ ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್‌ನಿಂದ ಕಿರುಕುಳ ನಡೆದ ಘಟನೆ ವರದಿಯಾಗಿದೆ.

ಕಾವೇರಪ್ಪ‌ ಮಾಲಿಕತ್ವದ ಈಶ್ವರ ನಿಲಯ ಎಂಬ ಹೋಮ್ಸ್ ಸ್ಟೇ ನಲ್ಲಿ ಹೋಮ್ಸ್ ಸ್ಟೇ ಕೇರ್ ಟೇಕರ್‌ನಿಂದ ರಾತ್ರಿ 2 ಗಂಟೆಯಿಂದ 4 ಗಂಟೆವರೆಗೆ ಕಿರುಕುಳ ಆಗಿದೆ ಎಂದು ದೂರು ನೀಡಲಾಗಿದೆ.

ಹೋಮ್ಸ್ ಸ್ಟೇ ಕೇರ್ ಟೇಕರ್ ಕುಮಾರ @ ಪ್ರವೀಣ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಆರೋಪಸಲಾಗಿದೆ.

ಡೋರ್ ಓಪನ್ ಮಾಡುವಂತೆ ತಾಯಿ ಮಗಳಿಗೆ ಕೇರ್ ಟೇಕರ್‌ನಿಂದ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.

ತಾಯಿ ಮಗಳು ಇಬ್ಬರೇ ಉಳಿದುಕೊಂಡಿದ್ದ ಹೋಮ್ಸ್ ಸ್ಟೇ
ಭಯವಾಗಿ ಬಾಗಿಲು ಓಪನ್‌ ಮಾಡದ ಪ್ರವಾಸಿ ತಾಯಿ‌ ಮಗಳು, ಕುಡಿದು ಬಂದಿದ್ದ ಹೋಮ್ಸ್ ಸ್ಟೇ ಕೇರ್ ಟೇಕರ್ ಎಂದ ಪ್ರವಾಸಿ ಮಹಿಳೆ ಆರೋಪಿಸಿದ್ದಾರೆ.

ಇದು ನಮ್ಮ ಜೀವನದ ಅತ್ಯಂತ ಕೆಟ್ಟ ಅನುಭವ ಎಂದು ತಮ್ಮ ಅಸಮಾಧಾನವನ್ನು ಮಾಧ್ಯಮದವರೊಂದಿಗೆ ವ್ಯಕ್ತಪಡಿಸಿದ್ದಾರೆ.

ಓಪನ್‌ ಮಾಡದಿದ್ದಕ್ಕೆ ನಂತರ ನಾಲ್ಕು ಚಕ್ರಗಳ ಕಾರು ಪಂಕ್ಚರ್ ಮಾಡಿರುವದಾಗಿ ಅವರು ತಿಳಿಸಿದ್ದಾರೆ.

ಹೋಮ್ಸ್ ಸ್ಟೇ ಮಾಲೀಕನಿಗೆ ಕರೆ ಮಾಡಿದ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಅಂತ ಆರೋಪ ಮಾಡಿದ್ದಾರೆ.

ಬೆಂಗಳೂರು ಮೂಲದ ತಾಯಿ‌ ಮಗಳು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಊಟಿಯಿಂದ ಕೊಡಗಿಗೆ ಬಂದು ಹೋಮ್ಸ್ ಸ್ಟೇನಲ್ಲಿ ಉಳಿದುಕೊಂಡಿದ್ದರು.

ಈ ಬಗ್ಗೆ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆ
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

26 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 hour ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

11 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago