ಮಡಿವಂತಿಕೆ‌ ಬಿಟ್ಟು ಲೈಂಗಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು-ಜೆ.ರಾಜೇಂದ್ರ

ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಅದು ಹೆಚ್‌.ಐ. ವಿ. ಇದು ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದೆ, ಜಾಗತಿಕವಾಗಿ ಏಡ್ಸ್, ಲೈಂಗಿಕ ಶಿಕ್ಷಣಕ್ಕೆ ಹೊಸ ತುರ್ತು ಪ್ರಜ್ಞೆಯನ್ನು ನೀಡಿದೆ ಎಂದು ದೇವರಾಜ ಅರಸು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಬೆಂಗಳೂರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಬೆಂ. ಗ್ರಾ. ಜಿಲ್ಲೆ. ನೆಹರು ಯುವ ಕೇಂದ್ರ. ಬೆಂ. ಗ್ರಾ. ಜಿಲ್ಲೆ ಮತ್ತು ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಎಂ.ವೈ. ಕೆ ಸದಸ್ಯರಿಗೆ ಎಚ್.ಐ.ವಿ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವ ಮನಸ್ಸುಗಳು ಯಾವುದೇ ಮುಜುಗರ, ಮಡಿವಂತಿಕೆಯನ್ನು ಬಿಟ್ಟು ಲೈಂಗಿಕ ಶಿಕ್ಷಣ ಕುರಿತಾದ
ಲೈಂಗಿಕ ಸಂತಾನೋತ್ಪತ್ತಿ , ಸುರಕ್ಷಿತ ಲೈಂಗಿಕತೆ ಮತ್ತು ಜನನ ನಿಯಂತ್ರಣ , ಲೈಂಗಿಕ ಆರೋಗ್ಯ , ಸಂತಾನೋತ್ಪತ್ತಿ ಆರೋಗ್ಯ , ಭಾವನಾತ್ಮಕ ಸಂಬಂಧಗಳು ಮತ್ತು ಜವಾಬ್ಧಾರಿಗಳ ಬಗ್ಗೆ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕರಾದ ಸವಿತಾ ಹೆಗಡೆ ಮಾತನಾಡಿ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಒಬ್ಬ ವ್ಯಕ್ತಿಯು ಇನ್ನೊಬ್ಬ ಹೆಚ್.ಐ.ವಿ ಸೋಂಕಿತ ವ್ಯಕ್ತಿಯೊಂದಿಗೆ ಕಾಂಡೋಮ್ ಬಳಸದೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಸೋಂಕು ತಗಲುವುದು ಎಂದರು.

ಸರಿಯಾಗಿ ಶುದ್ಧವಾಗದ ಸೂಜಿ ಮತ್ತು ಇತರೆ ಆಸ್ಪತ್ರೆಯ ಉಪಕರಣಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದರಿಂದ ಶಸ್ತ್ರ ಕ್ರಿಯೆಯ ಉಪಕರಣಗಳಾದ ಸ್ಕ್ಯಾಪಲ್, ಸೀರಂಜು ಅಥವಾ ಇನ್ನಿತರ ಕೆಲ ಉಪಕರಣಗಳನ್ನು ಸೋಂಕಿತನಿಗೆ ಬಳಸಿದ ಮೇಲೆ ಕ್ರಿಮಿ ಶುದ್ಧ ಮಾಡದೆ ಬೇರೊಬ್ಬರ ಮೇಲೆ ಉಪಯೋಗಿಸುವುದರಿಂದ, ಸುರಕ್ಷಿತವಲ್ಲದ ರಕ್ತದಿಂದ ಹೆಚ್. ಐ.ವಿ ಸೋಂಕು ಹರಡಬಹುದು,
ಸೋಂಕಿತ ತಾಯಿ ತಂದೆಯರಿಂದ ಮಗುವಿಗೆ ಸೋಂಕು ಹರಡುಬಹುದು, ಒಬ್ಬ ಹೆಚ್ ಐವಿ ಸೊಂಕಿತ ತಾಯಿಯು ಗರ್ಭಿಣಿಯಿದ್ದಾಗಲೆ ಅಥವಾ ಜನನ ಸಮಯದಲ್ಲಿ ಸೋಂಕು ಹರಡಬಹುದು ಎಂದರು.

ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ನಾಗೇಶ್ ಮಾತನಾಡಿ
ಕ್ಷಯ ರೋಗ ಎನ್ನುವುದು ಮೈಕ್ರೋ ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಒಂದು ಆರೋಗ್ಯ ಸಮಸ್ಯೆ. ಕ್ಷಯ ರೋಗದ ಪ್ರಮುಖವಾದ ಲಕ್ಷಣ ಎಂದರೆ ತೀವ್ರವಾದ ಕೆಮ್ಮು. ಈ ಸಮಸ್ಯೆಯು ಮೂರು ವಾರ ಅಥವಾ ಅದಕ್ಕಿಂತಲೂ ಅಧಿಕ ಸಮಯಗಳ ಕಾಲ ಮುಂದುವರಿಯುವ ಸಾಧ್ಯತೆಗಳಿರುತ್ತವೆ. ರಕ್ತದಿಂದ ಕೂಡಿರುವ ಅಥವಾ ಬೇರೆ ಬೇರೆ ಬಣ್ಣದಲ್ಲಿ ಇರುವ ಕಫ, ಜ್ವರ, ಆಯಾಸ, ಎದೆ ನೋವು, ಉಸಿರಾಟದ ತೊಂದರೆ, ಹಸಿವಾಗದೆ ಇರುವುದು ರೋಗದ ಲಕ್ಷಣಗಳು. ಒಮ್ಮೆ ಈ ಆರೋಗ್ಯ ಸಮಸ್ಯೆ ಉಂಟಾದರೆ ಇದಕ್ಕೆ ಸುಮಾರು 9 ತಿಂಗಳುಗಳ ಕಾಲ ಚಿಕಿತ್ಸೆಯನ್ನು ನೀಡಬೇಕಾಗಬಹುವುದು, ನಂತರದ ದಿನಗಳಲ್ಲಿ ನಿಧಾನವಾಗಿ ಕ್ಷಯರೋಗವು ಗುಣಮುಖವಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

5 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

6 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

17 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

20 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

21 hours ago