ಮಡಿವಂತಿಕೆ‌ ಬಿಟ್ಟು ಲೈಂಗಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು-ಜೆ.ರಾಜೇಂದ್ರ

ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಅದು ಹೆಚ್‌.ಐ. ವಿ. ಇದು ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದೆ, ಜಾಗತಿಕವಾಗಿ ಏಡ್ಸ್, ಲೈಂಗಿಕ ಶಿಕ್ಷಣಕ್ಕೆ ಹೊಸ ತುರ್ತು ಪ್ರಜ್ಞೆಯನ್ನು ನೀಡಿದೆ ಎಂದು ದೇವರಾಜ ಅರಸು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಬೆಂಗಳೂರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಬೆಂ. ಗ್ರಾ. ಜಿಲ್ಲೆ. ನೆಹರು ಯುವ ಕೇಂದ್ರ. ಬೆಂ. ಗ್ರಾ. ಜಿಲ್ಲೆ ಮತ್ತು ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಎಂ.ವೈ. ಕೆ ಸದಸ್ಯರಿಗೆ ಎಚ್.ಐ.ವಿ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವ ಮನಸ್ಸುಗಳು ಯಾವುದೇ ಮುಜುಗರ, ಮಡಿವಂತಿಕೆಯನ್ನು ಬಿಟ್ಟು ಲೈಂಗಿಕ ಶಿಕ್ಷಣ ಕುರಿತಾದ
ಲೈಂಗಿಕ ಸಂತಾನೋತ್ಪತ್ತಿ , ಸುರಕ್ಷಿತ ಲೈಂಗಿಕತೆ ಮತ್ತು ಜನನ ನಿಯಂತ್ರಣ , ಲೈಂಗಿಕ ಆರೋಗ್ಯ , ಸಂತಾನೋತ್ಪತ್ತಿ ಆರೋಗ್ಯ , ಭಾವನಾತ್ಮಕ ಸಂಬಂಧಗಳು ಮತ್ತು ಜವಾಬ್ಧಾರಿಗಳ ಬಗ್ಗೆ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕರಾದ ಸವಿತಾ ಹೆಗಡೆ ಮಾತನಾಡಿ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಒಬ್ಬ ವ್ಯಕ್ತಿಯು ಇನ್ನೊಬ್ಬ ಹೆಚ್.ಐ.ವಿ ಸೋಂಕಿತ ವ್ಯಕ್ತಿಯೊಂದಿಗೆ ಕಾಂಡೋಮ್ ಬಳಸದೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಸೋಂಕು ತಗಲುವುದು ಎಂದರು.

ಸರಿಯಾಗಿ ಶುದ್ಧವಾಗದ ಸೂಜಿ ಮತ್ತು ಇತರೆ ಆಸ್ಪತ್ರೆಯ ಉಪಕರಣಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದರಿಂದ ಶಸ್ತ್ರ ಕ್ರಿಯೆಯ ಉಪಕರಣಗಳಾದ ಸ್ಕ್ಯಾಪಲ್, ಸೀರಂಜು ಅಥವಾ ಇನ್ನಿತರ ಕೆಲ ಉಪಕರಣಗಳನ್ನು ಸೋಂಕಿತನಿಗೆ ಬಳಸಿದ ಮೇಲೆ ಕ್ರಿಮಿ ಶುದ್ಧ ಮಾಡದೆ ಬೇರೊಬ್ಬರ ಮೇಲೆ ಉಪಯೋಗಿಸುವುದರಿಂದ, ಸುರಕ್ಷಿತವಲ್ಲದ ರಕ್ತದಿಂದ ಹೆಚ್. ಐ.ವಿ ಸೋಂಕು ಹರಡಬಹುದು,
ಸೋಂಕಿತ ತಾಯಿ ತಂದೆಯರಿಂದ ಮಗುವಿಗೆ ಸೋಂಕು ಹರಡುಬಹುದು, ಒಬ್ಬ ಹೆಚ್ ಐವಿ ಸೊಂಕಿತ ತಾಯಿಯು ಗರ್ಭಿಣಿಯಿದ್ದಾಗಲೆ ಅಥವಾ ಜನನ ಸಮಯದಲ್ಲಿ ಸೋಂಕು ಹರಡಬಹುದು ಎಂದರು.

ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ನಾಗೇಶ್ ಮಾತನಾಡಿ
ಕ್ಷಯ ರೋಗ ಎನ್ನುವುದು ಮೈಕ್ರೋ ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಒಂದು ಆರೋಗ್ಯ ಸಮಸ್ಯೆ. ಕ್ಷಯ ರೋಗದ ಪ್ರಮುಖವಾದ ಲಕ್ಷಣ ಎಂದರೆ ತೀವ್ರವಾದ ಕೆಮ್ಮು. ಈ ಸಮಸ್ಯೆಯು ಮೂರು ವಾರ ಅಥವಾ ಅದಕ್ಕಿಂತಲೂ ಅಧಿಕ ಸಮಯಗಳ ಕಾಲ ಮುಂದುವರಿಯುವ ಸಾಧ್ಯತೆಗಳಿರುತ್ತವೆ. ರಕ್ತದಿಂದ ಕೂಡಿರುವ ಅಥವಾ ಬೇರೆ ಬೇರೆ ಬಣ್ಣದಲ್ಲಿ ಇರುವ ಕಫ, ಜ್ವರ, ಆಯಾಸ, ಎದೆ ನೋವು, ಉಸಿರಾಟದ ತೊಂದರೆ, ಹಸಿವಾಗದೆ ಇರುವುದು ರೋಗದ ಲಕ್ಷಣಗಳು. ಒಮ್ಮೆ ಈ ಆರೋಗ್ಯ ಸಮಸ್ಯೆ ಉಂಟಾದರೆ ಇದಕ್ಕೆ ಸುಮಾರು 9 ತಿಂಗಳುಗಳ ಕಾಲ ಚಿಕಿತ್ಸೆಯನ್ನು ನೀಡಬೇಕಾಗಬಹುವುದು, ನಂತರದ ದಿನಗಳಲ್ಲಿ ನಿಧಾನವಾಗಿ ಕ್ಷಯರೋಗವು ಗುಣಮುಖವಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

8 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

9 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

15 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

16 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

21 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago