ಮಡಿವಂತಿಕೆ‌ ಬಿಟ್ಟು ಲೈಂಗಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು-ಜೆ.ರಾಜೇಂದ್ರ

ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಅದು ಹೆಚ್‌.ಐ. ವಿ. ಇದು ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದೆ, ಜಾಗತಿಕವಾಗಿ ಏಡ್ಸ್, ಲೈಂಗಿಕ ಶಿಕ್ಷಣಕ್ಕೆ ಹೊಸ ತುರ್ತು ಪ್ರಜ್ಞೆಯನ್ನು ನೀಡಿದೆ ಎಂದು ದೇವರಾಜ ಅರಸು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಬೆಂಗಳೂರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಬೆಂ. ಗ್ರಾ. ಜಿಲ್ಲೆ. ನೆಹರು ಯುವ ಕೇಂದ್ರ. ಬೆಂ. ಗ್ರಾ. ಜಿಲ್ಲೆ ಮತ್ತು ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಎಂ.ವೈ. ಕೆ ಸದಸ್ಯರಿಗೆ ಎಚ್.ಐ.ವಿ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವ ಮನಸ್ಸುಗಳು ಯಾವುದೇ ಮುಜುಗರ, ಮಡಿವಂತಿಕೆಯನ್ನು ಬಿಟ್ಟು ಲೈಂಗಿಕ ಶಿಕ್ಷಣ ಕುರಿತಾದ
ಲೈಂಗಿಕ ಸಂತಾನೋತ್ಪತ್ತಿ , ಸುರಕ್ಷಿತ ಲೈಂಗಿಕತೆ ಮತ್ತು ಜನನ ನಿಯಂತ್ರಣ , ಲೈಂಗಿಕ ಆರೋಗ್ಯ , ಸಂತಾನೋತ್ಪತ್ತಿ ಆರೋಗ್ಯ , ಭಾವನಾತ್ಮಕ ಸಂಬಂಧಗಳು ಮತ್ತು ಜವಾಬ್ಧಾರಿಗಳ ಬಗ್ಗೆ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕರಾದ ಸವಿತಾ ಹೆಗಡೆ ಮಾತನಾಡಿ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಒಬ್ಬ ವ್ಯಕ್ತಿಯು ಇನ್ನೊಬ್ಬ ಹೆಚ್.ಐ.ವಿ ಸೋಂಕಿತ ವ್ಯಕ್ತಿಯೊಂದಿಗೆ ಕಾಂಡೋಮ್ ಬಳಸದೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಸೋಂಕು ತಗಲುವುದು ಎಂದರು.

ಸರಿಯಾಗಿ ಶುದ್ಧವಾಗದ ಸೂಜಿ ಮತ್ತು ಇತರೆ ಆಸ್ಪತ್ರೆಯ ಉಪಕರಣಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದರಿಂದ ಶಸ್ತ್ರ ಕ್ರಿಯೆಯ ಉಪಕರಣಗಳಾದ ಸ್ಕ್ಯಾಪಲ್, ಸೀರಂಜು ಅಥವಾ ಇನ್ನಿತರ ಕೆಲ ಉಪಕರಣಗಳನ್ನು ಸೋಂಕಿತನಿಗೆ ಬಳಸಿದ ಮೇಲೆ ಕ್ರಿಮಿ ಶುದ್ಧ ಮಾಡದೆ ಬೇರೊಬ್ಬರ ಮೇಲೆ ಉಪಯೋಗಿಸುವುದರಿಂದ, ಸುರಕ್ಷಿತವಲ್ಲದ ರಕ್ತದಿಂದ ಹೆಚ್. ಐ.ವಿ ಸೋಂಕು ಹರಡಬಹುದು,
ಸೋಂಕಿತ ತಾಯಿ ತಂದೆಯರಿಂದ ಮಗುವಿಗೆ ಸೋಂಕು ಹರಡುಬಹುದು, ಒಬ್ಬ ಹೆಚ್ ಐವಿ ಸೊಂಕಿತ ತಾಯಿಯು ಗರ್ಭಿಣಿಯಿದ್ದಾಗಲೆ ಅಥವಾ ಜನನ ಸಮಯದಲ್ಲಿ ಸೋಂಕು ಹರಡಬಹುದು ಎಂದರು.

ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ನಾಗೇಶ್ ಮಾತನಾಡಿ
ಕ್ಷಯ ರೋಗ ಎನ್ನುವುದು ಮೈಕ್ರೋ ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಒಂದು ಆರೋಗ್ಯ ಸಮಸ್ಯೆ. ಕ್ಷಯ ರೋಗದ ಪ್ರಮುಖವಾದ ಲಕ್ಷಣ ಎಂದರೆ ತೀವ್ರವಾದ ಕೆಮ್ಮು. ಈ ಸಮಸ್ಯೆಯು ಮೂರು ವಾರ ಅಥವಾ ಅದಕ್ಕಿಂತಲೂ ಅಧಿಕ ಸಮಯಗಳ ಕಾಲ ಮುಂದುವರಿಯುವ ಸಾಧ್ಯತೆಗಳಿರುತ್ತವೆ. ರಕ್ತದಿಂದ ಕೂಡಿರುವ ಅಥವಾ ಬೇರೆ ಬೇರೆ ಬಣ್ಣದಲ್ಲಿ ಇರುವ ಕಫ, ಜ್ವರ, ಆಯಾಸ, ಎದೆ ನೋವು, ಉಸಿರಾಟದ ತೊಂದರೆ, ಹಸಿವಾಗದೆ ಇರುವುದು ರೋಗದ ಲಕ್ಷಣಗಳು. ಒಮ್ಮೆ ಈ ಆರೋಗ್ಯ ಸಮಸ್ಯೆ ಉಂಟಾದರೆ ಇದಕ್ಕೆ ಸುಮಾರು 9 ತಿಂಗಳುಗಳ ಕಾಲ ಚಿಕಿತ್ಸೆಯನ್ನು ನೀಡಬೇಕಾಗಬಹುವುದು, ನಂತರದ ದಿನಗಳಲ್ಲಿ ನಿಧಾನವಾಗಿ ಕ್ಷಯರೋಗವು ಗುಣಮುಖವಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago