ಮಡಿವಂತಿಕೆ‌ ಬಿಟ್ಟು ಲೈಂಗಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು-ಜೆ.ರಾಜೇಂದ್ರ

ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಅದು ಹೆಚ್‌.ಐ. ವಿ. ಇದು ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದೆ, ಜಾಗತಿಕವಾಗಿ ಏಡ್ಸ್, ಲೈಂಗಿಕ ಶಿಕ್ಷಣಕ್ಕೆ ಹೊಸ ತುರ್ತು ಪ್ರಜ್ಞೆಯನ್ನು ನೀಡಿದೆ ಎಂದು ದೇವರಾಜ ಅರಸು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಬೆಂಗಳೂರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಬೆಂ. ಗ್ರಾ. ಜಿಲ್ಲೆ. ನೆಹರು ಯುವ ಕೇಂದ್ರ. ಬೆಂ. ಗ್ರಾ. ಜಿಲ್ಲೆ ಮತ್ತು ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಎಂ.ವೈ. ಕೆ ಸದಸ್ಯರಿಗೆ ಎಚ್.ಐ.ವಿ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವ ಮನಸ್ಸುಗಳು ಯಾವುದೇ ಮುಜುಗರ, ಮಡಿವಂತಿಕೆಯನ್ನು ಬಿಟ್ಟು ಲೈಂಗಿಕ ಶಿಕ್ಷಣ ಕುರಿತಾದ
ಲೈಂಗಿಕ ಸಂತಾನೋತ್ಪತ್ತಿ , ಸುರಕ್ಷಿತ ಲೈಂಗಿಕತೆ ಮತ್ತು ಜನನ ನಿಯಂತ್ರಣ , ಲೈಂಗಿಕ ಆರೋಗ್ಯ , ಸಂತಾನೋತ್ಪತ್ತಿ ಆರೋಗ್ಯ , ಭಾವನಾತ್ಮಕ ಸಂಬಂಧಗಳು ಮತ್ತು ಜವಾಬ್ಧಾರಿಗಳ ಬಗ್ಗೆ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕರಾದ ಸವಿತಾ ಹೆಗಡೆ ಮಾತನಾಡಿ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಒಬ್ಬ ವ್ಯಕ್ತಿಯು ಇನ್ನೊಬ್ಬ ಹೆಚ್.ಐ.ವಿ ಸೋಂಕಿತ ವ್ಯಕ್ತಿಯೊಂದಿಗೆ ಕಾಂಡೋಮ್ ಬಳಸದೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಸೋಂಕು ತಗಲುವುದು ಎಂದರು.

ಸರಿಯಾಗಿ ಶುದ್ಧವಾಗದ ಸೂಜಿ ಮತ್ತು ಇತರೆ ಆಸ್ಪತ್ರೆಯ ಉಪಕರಣಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದರಿಂದ ಶಸ್ತ್ರ ಕ್ರಿಯೆಯ ಉಪಕರಣಗಳಾದ ಸ್ಕ್ಯಾಪಲ್, ಸೀರಂಜು ಅಥವಾ ಇನ್ನಿತರ ಕೆಲ ಉಪಕರಣಗಳನ್ನು ಸೋಂಕಿತನಿಗೆ ಬಳಸಿದ ಮೇಲೆ ಕ್ರಿಮಿ ಶುದ್ಧ ಮಾಡದೆ ಬೇರೊಬ್ಬರ ಮೇಲೆ ಉಪಯೋಗಿಸುವುದರಿಂದ, ಸುರಕ್ಷಿತವಲ್ಲದ ರಕ್ತದಿಂದ ಹೆಚ್. ಐ.ವಿ ಸೋಂಕು ಹರಡಬಹುದು,
ಸೋಂಕಿತ ತಾಯಿ ತಂದೆಯರಿಂದ ಮಗುವಿಗೆ ಸೋಂಕು ಹರಡುಬಹುದು, ಒಬ್ಬ ಹೆಚ್ ಐವಿ ಸೊಂಕಿತ ತಾಯಿಯು ಗರ್ಭಿಣಿಯಿದ್ದಾಗಲೆ ಅಥವಾ ಜನನ ಸಮಯದಲ್ಲಿ ಸೋಂಕು ಹರಡಬಹುದು ಎಂದರು.

ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ನಾಗೇಶ್ ಮಾತನಾಡಿ
ಕ್ಷಯ ರೋಗ ಎನ್ನುವುದು ಮೈಕ್ರೋ ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಒಂದು ಆರೋಗ್ಯ ಸಮಸ್ಯೆ. ಕ್ಷಯ ರೋಗದ ಪ್ರಮುಖವಾದ ಲಕ್ಷಣ ಎಂದರೆ ತೀವ್ರವಾದ ಕೆಮ್ಮು. ಈ ಸಮಸ್ಯೆಯು ಮೂರು ವಾರ ಅಥವಾ ಅದಕ್ಕಿಂತಲೂ ಅಧಿಕ ಸಮಯಗಳ ಕಾಲ ಮುಂದುವರಿಯುವ ಸಾಧ್ಯತೆಗಳಿರುತ್ತವೆ. ರಕ್ತದಿಂದ ಕೂಡಿರುವ ಅಥವಾ ಬೇರೆ ಬೇರೆ ಬಣ್ಣದಲ್ಲಿ ಇರುವ ಕಫ, ಜ್ವರ, ಆಯಾಸ, ಎದೆ ನೋವು, ಉಸಿರಾಟದ ತೊಂದರೆ, ಹಸಿವಾಗದೆ ಇರುವುದು ರೋಗದ ಲಕ್ಷಣಗಳು. ಒಮ್ಮೆ ಈ ಆರೋಗ್ಯ ಸಮಸ್ಯೆ ಉಂಟಾದರೆ ಇದಕ್ಕೆ ಸುಮಾರು 9 ತಿಂಗಳುಗಳ ಕಾಲ ಚಿಕಿತ್ಸೆಯನ್ನು ನೀಡಬೇಕಾಗಬಹುವುದು, ನಂತರದ ದಿನಗಳಲ್ಲಿ ನಿಧಾನವಾಗಿ ಕ್ಷಯರೋಗವು ಗುಣಮುಖವಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

6 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

21 hours ago