Categories: ಕೋಲಾರ

ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಒತ್ತಾಯಕ್ಕೆ ಧ್ವನಿಯಾಗಿ-ರವಿಕುಮಾರ್

ಕೋಲಾರ: ಸಮಾಜದಲ್ಲಿ ಶೋಷಿತ ಸಮುದಾಯಗಳಲ್ಲಿ ಮಡಿವಾಳ ಸಮುದಾಯವು ಒಂದಾಗಿದ್ದು ರಾಜಕೀಯ, ಶೈಕ್ಷಣಿಕ, ಆರ್ಥಿಕ ಸ್ಥಾನಮಾನಗಳಿಗಾಗಿ ಸರಕಾರವು ಸಮುದಾಯವನ್ನು ಪರಿಶಿಷ್ಟ ಜಾರಿಗೆ ಸೇರಿಸಬೇಕಾಗಿದೆ ಇದಕ್ಕೆ ಒಗ್ಗಟ್ಟಿನಿಂದ ಸರಕಾರದ ಮೇಲೆ ಒತ್ತಡ ಹಾಕಬೇಕಾಗಿದೆ ಎಂದು ಮುಖ್ಯಮಂತ್ರಿಗಳ ವೈದ್ಯಕೀಯ ಸಲಹೆಗಾರ ಡಾ.ಹೆಚ್ ರವಿಕುಮಾರ್ ಕರೆ ನೀಡಿದರು.

ನಗರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಡಿವಾಳ ಜನಾಂಗದ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 5 ಮತ್ತು 6ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸಮುದಾಯವಾಗಲಿ ರಾಜಕೀಯ ಶಕ್ತಿ ಇದ್ದರೆ ಅಷ್ಟೇ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಇವತ್ತಿನ ಮೂರು ರಾಜಕೀಯ ಪಕ್ಷಗಳಿಗೆ ಮಡಿವಾಳ ಸಮುದಾಯದ ಬಗ್ಗೆ ಕಾಳಜಿ ಮತ್ತು ಇಚ್ಛಾಶಕ್ತಿ ಕೊರತೆಯಾಗಿದೆ ನಾವು ಎಲ್ಲರೂ ಒಗ್ಗಟ್ಟು ಆಗದೆ ಹೋದರೆ ಮುಂದಿನ ದಿನಗಳಲ್ಲಿ ನಮಗೆಲ್ಲ ಉಳಿಗಾಲವಿಲ್ಲ ಎಂದರು.

ಸಮಾಜದಲ್ಲಿನ ಕೇವಲ ಅರ್ಹತೆಯ ಆಧಾರದ ಮೇಲೆ ನೌಕರಿ ಸಿಗುತ್ತದೆ ಒಂದಿಷ್ಟು ಜನಕ್ಕೆ ಅವಕಾಶ ಸಿಕ್ಕರೂ ಅವಮಾನ ಅಸಮಾನತೆಯ ಜಾತಿಯ ಮುಂದಿಟ್ಟು ಪ್ರಮುಖ ಹುದ್ದೆಗಳನ್ನು ತಪ್ಪಿಸಲಾಗುತ್ತಿದೆ ಜನಸಂಖ್ಯೆ ಮತ್ತು ಜಾತಿಯ ಆಧಾರದ ಮೂಲಕ ಚುನಾವಣಾ ಸ್ಥಾನಮಾನಗಳನ್ನು ಕೊಡಲಾಗುತ್ತಿದೆ ಹೊರತು ಸಣ್ಣ ಸಣ್ಣ ಸಮುದಾಯಗಳಿಗೆ ಅವಕಾಶಗಳಿಂದ ವಂಚಿತರಾಗುವಂತೆ ಮಾಡಿದ್ದಾರೆ ಮಡಿವಾಳ ಜನಾಂಗಕ್ಕೆ ಶಿಕ್ಷಣ ಮತ್ತು ಉದ್ಯೋಗವೇ ದಾರಿದ್ವೀಪವಾಗಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಸಮಾಜದಲ್ಲಿ ವೃತ್ತಿ ಮತ್ತು ಜಾತಿಗಳು ಅಸಮಾನತೆ, ಶೋಷಣೆ, ದಬ್ಬಾಳಿಕೆಗಳಿಂದ ಕಾಯಕ ಸಮುದಾಯಗಳಿಗೆ ಶಾಪವಾಗಿದೆ ಎಲ್ಲಾ ಸಮುದಾಯಗಳಲ್ಲಿ ಬಡವರು ಇದ್ದು ಅಂತವರಿಗೆ ಮೀಸಲಾತಿ ನೀಡಬೇಕು ಪ್ರತಿ ಸಮುದಾಯಕ್ಕೂ ನಿಗಮ ಮಾಡಿ ಒಂದಿಷ್ಟು ಅನುದಾನ ಅಂತ ಕೊಡುವುದು ಬಿಟ್ಟು ಸರಕಾರದ ಸಂಪುಟದ ಉಪಸಮಿತಿ ರಚನೆ ಮಾಡಿ ಅದರ ನೇತೃತ್ವದಲ್ಲಿ ಸಣ್ಣ ಸಣ್ಣ ಸಮುದಾಯಗಳ ಏಳಿಗೆಗಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ
ಮಡಿವಾಳ ಸಮುದಾಯದ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಮಂಜುನಾಥ್ ಮಾತನಾಡಿ, ಸಮುದಾಯದ ಪರವಾಗಿ ರಾಜಕೀಯವಾಗಿ ಧ್ವನಿ ಎತ್ತುವವರು ಇಲ್ಲವಾಗಿದೆ ಮಡಿವಾಳ ಸಮುದಾಯವು ಒಗ್ಗಟ್ಟನ್ನು ಪ್ರದರ್ಶಿಸಿ ರಾಜಕೀಯ ಶಕ್ತಿಯಾಗಿ ಗುರುತಿಸಿಕೊಳ್ಳಬೇಕು ವಿಧ್ಯಾರ್ಥಿಗಳು ಸತತ ಪ್ರಯತ್ನದಿಂದ ಉನ್ನತ ಸ್ಥಾನಮಾನ ಪಡೆದು ಸಮುದಾಯದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮಿಸಬೇಕು ಎಂದರು.

ವೇದಿಕೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಸಿ.ವಿ ವೆಂಕಟೇಶ್, ನಿವೃತ್ತ ಇಂಜಿನಿಯರ್ ನಾರಾಯಣಸ್ವಾಮಿ, ಕೆಜಿಎಫ್ ಆರ್.ಟಿ.ಒ ಶ್ರೀನಿವಾಸಮೂರ್ತಿ, ಸಮುದಾಯ ಮುಖಂಡರಾದ ಗಿರೀಶ್ ಬಾಬು, ಕೆ.ಎಂ ಕೃಷ್ಣಪ್ಪ, ವಿ.ಅಮರನಾಥ್, ಕೆ.ಸಿ ಮುಖೇಶ್, ಸುಬ್ರಮಣಿ, ಅಮರಾವತಿ ರಾಜಣ್ಣ, ಸೋಮಶೇಖರ್, ಮುಂತಾದವರು ಇದ್ದರು.

Ramesh Babu

Journalist

Recent Posts

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

3 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

4 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

6 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

6 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

6 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

8 hours ago