Categories: ಕೋಲಾರ

ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಒತ್ತಾಯಕ್ಕೆ ಧ್ವನಿಯಾಗಿ-ರವಿಕುಮಾರ್

ಕೋಲಾರ: ಸಮಾಜದಲ್ಲಿ ಶೋಷಿತ ಸಮುದಾಯಗಳಲ್ಲಿ ಮಡಿವಾಳ ಸಮುದಾಯವು ಒಂದಾಗಿದ್ದು ರಾಜಕೀಯ, ಶೈಕ್ಷಣಿಕ, ಆರ್ಥಿಕ ಸ್ಥಾನಮಾನಗಳಿಗಾಗಿ ಸರಕಾರವು ಸಮುದಾಯವನ್ನು ಪರಿಶಿಷ್ಟ ಜಾರಿಗೆ ಸೇರಿಸಬೇಕಾಗಿದೆ ಇದಕ್ಕೆ ಒಗ್ಗಟ್ಟಿನಿಂದ ಸರಕಾರದ ಮೇಲೆ ಒತ್ತಡ ಹಾಕಬೇಕಾಗಿದೆ ಎಂದು ಮುಖ್ಯಮಂತ್ರಿಗಳ ವೈದ್ಯಕೀಯ ಸಲಹೆಗಾರ ಡಾ.ಹೆಚ್ ರವಿಕುಮಾರ್ ಕರೆ ನೀಡಿದರು.

ನಗರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಡಿವಾಳ ಜನಾಂಗದ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 5 ಮತ್ತು 6ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸಮುದಾಯವಾಗಲಿ ರಾಜಕೀಯ ಶಕ್ತಿ ಇದ್ದರೆ ಅಷ್ಟೇ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಇವತ್ತಿನ ಮೂರು ರಾಜಕೀಯ ಪಕ್ಷಗಳಿಗೆ ಮಡಿವಾಳ ಸಮುದಾಯದ ಬಗ್ಗೆ ಕಾಳಜಿ ಮತ್ತು ಇಚ್ಛಾಶಕ್ತಿ ಕೊರತೆಯಾಗಿದೆ ನಾವು ಎಲ್ಲರೂ ಒಗ್ಗಟ್ಟು ಆಗದೆ ಹೋದರೆ ಮುಂದಿನ ದಿನಗಳಲ್ಲಿ ನಮಗೆಲ್ಲ ಉಳಿಗಾಲವಿಲ್ಲ ಎಂದರು.

ಸಮಾಜದಲ್ಲಿನ ಕೇವಲ ಅರ್ಹತೆಯ ಆಧಾರದ ಮೇಲೆ ನೌಕರಿ ಸಿಗುತ್ತದೆ ಒಂದಿಷ್ಟು ಜನಕ್ಕೆ ಅವಕಾಶ ಸಿಕ್ಕರೂ ಅವಮಾನ ಅಸಮಾನತೆಯ ಜಾತಿಯ ಮುಂದಿಟ್ಟು ಪ್ರಮುಖ ಹುದ್ದೆಗಳನ್ನು ತಪ್ಪಿಸಲಾಗುತ್ತಿದೆ ಜನಸಂಖ್ಯೆ ಮತ್ತು ಜಾತಿಯ ಆಧಾರದ ಮೂಲಕ ಚುನಾವಣಾ ಸ್ಥಾನಮಾನಗಳನ್ನು ಕೊಡಲಾಗುತ್ತಿದೆ ಹೊರತು ಸಣ್ಣ ಸಣ್ಣ ಸಮುದಾಯಗಳಿಗೆ ಅವಕಾಶಗಳಿಂದ ವಂಚಿತರಾಗುವಂತೆ ಮಾಡಿದ್ದಾರೆ ಮಡಿವಾಳ ಜನಾಂಗಕ್ಕೆ ಶಿಕ್ಷಣ ಮತ್ತು ಉದ್ಯೋಗವೇ ದಾರಿದ್ವೀಪವಾಗಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಸಮಾಜದಲ್ಲಿ ವೃತ್ತಿ ಮತ್ತು ಜಾತಿಗಳು ಅಸಮಾನತೆ, ಶೋಷಣೆ, ದಬ್ಬಾಳಿಕೆಗಳಿಂದ ಕಾಯಕ ಸಮುದಾಯಗಳಿಗೆ ಶಾಪವಾಗಿದೆ ಎಲ್ಲಾ ಸಮುದಾಯಗಳಲ್ಲಿ ಬಡವರು ಇದ್ದು ಅಂತವರಿಗೆ ಮೀಸಲಾತಿ ನೀಡಬೇಕು ಪ್ರತಿ ಸಮುದಾಯಕ್ಕೂ ನಿಗಮ ಮಾಡಿ ಒಂದಿಷ್ಟು ಅನುದಾನ ಅಂತ ಕೊಡುವುದು ಬಿಟ್ಟು ಸರಕಾರದ ಸಂಪುಟದ ಉಪಸಮಿತಿ ರಚನೆ ಮಾಡಿ ಅದರ ನೇತೃತ್ವದಲ್ಲಿ ಸಣ್ಣ ಸಣ್ಣ ಸಮುದಾಯಗಳ ಏಳಿಗೆಗಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ
ಮಡಿವಾಳ ಸಮುದಾಯದ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಮಂಜುನಾಥ್ ಮಾತನಾಡಿ, ಸಮುದಾಯದ ಪರವಾಗಿ ರಾಜಕೀಯವಾಗಿ ಧ್ವನಿ ಎತ್ತುವವರು ಇಲ್ಲವಾಗಿದೆ ಮಡಿವಾಳ ಸಮುದಾಯವು ಒಗ್ಗಟ್ಟನ್ನು ಪ್ರದರ್ಶಿಸಿ ರಾಜಕೀಯ ಶಕ್ತಿಯಾಗಿ ಗುರುತಿಸಿಕೊಳ್ಳಬೇಕು ವಿಧ್ಯಾರ್ಥಿಗಳು ಸತತ ಪ್ರಯತ್ನದಿಂದ ಉನ್ನತ ಸ್ಥಾನಮಾನ ಪಡೆದು ಸಮುದಾಯದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮಿಸಬೇಕು ಎಂದರು.

ವೇದಿಕೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಸಿ.ವಿ ವೆಂಕಟೇಶ್, ನಿವೃತ್ತ ಇಂಜಿನಿಯರ್ ನಾರಾಯಣಸ್ವಾಮಿ, ಕೆಜಿಎಫ್ ಆರ್.ಟಿ.ಒ ಶ್ರೀನಿವಾಸಮೂರ್ತಿ, ಸಮುದಾಯ ಮುಖಂಡರಾದ ಗಿರೀಶ್ ಬಾಬು, ಕೆ.ಎಂ ಕೃಷ್ಣಪ್ಪ, ವಿ.ಅಮರನಾಥ್, ಕೆ.ಸಿ ಮುಖೇಶ್, ಸುಬ್ರಮಣಿ, ಅಮರಾವತಿ ರಾಜಣ್ಣ, ಸೋಮಶೇಖರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

6 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

7 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

7 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

16 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

1 day ago