Categories: ಕೋಲಾರ

ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಒತ್ತಾಯಕ್ಕೆ ಧ್ವನಿಯಾಗಿ-ರವಿಕುಮಾರ್

ಕೋಲಾರ: ಸಮಾಜದಲ್ಲಿ ಶೋಷಿತ ಸಮುದಾಯಗಳಲ್ಲಿ ಮಡಿವಾಳ ಸಮುದಾಯವು ಒಂದಾಗಿದ್ದು ರಾಜಕೀಯ, ಶೈಕ್ಷಣಿಕ, ಆರ್ಥಿಕ ಸ್ಥಾನಮಾನಗಳಿಗಾಗಿ ಸರಕಾರವು ಸಮುದಾಯವನ್ನು ಪರಿಶಿಷ್ಟ ಜಾರಿಗೆ ಸೇರಿಸಬೇಕಾಗಿದೆ ಇದಕ್ಕೆ ಒಗ್ಗಟ್ಟಿನಿಂದ ಸರಕಾರದ ಮೇಲೆ ಒತ್ತಡ ಹಾಕಬೇಕಾಗಿದೆ ಎಂದು ಮುಖ್ಯಮಂತ್ರಿಗಳ ವೈದ್ಯಕೀಯ ಸಲಹೆಗಾರ ಡಾ.ಹೆಚ್ ರವಿಕುಮಾರ್ ಕರೆ ನೀಡಿದರು.

ನಗರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಡಿವಾಳ ಜನಾಂಗದ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 5 ಮತ್ತು 6ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸಮುದಾಯವಾಗಲಿ ರಾಜಕೀಯ ಶಕ್ತಿ ಇದ್ದರೆ ಅಷ್ಟೇ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಇವತ್ತಿನ ಮೂರು ರಾಜಕೀಯ ಪಕ್ಷಗಳಿಗೆ ಮಡಿವಾಳ ಸಮುದಾಯದ ಬಗ್ಗೆ ಕಾಳಜಿ ಮತ್ತು ಇಚ್ಛಾಶಕ್ತಿ ಕೊರತೆಯಾಗಿದೆ ನಾವು ಎಲ್ಲರೂ ಒಗ್ಗಟ್ಟು ಆಗದೆ ಹೋದರೆ ಮುಂದಿನ ದಿನಗಳಲ್ಲಿ ನಮಗೆಲ್ಲ ಉಳಿಗಾಲವಿಲ್ಲ ಎಂದರು.

ಸಮಾಜದಲ್ಲಿನ ಕೇವಲ ಅರ್ಹತೆಯ ಆಧಾರದ ಮೇಲೆ ನೌಕರಿ ಸಿಗುತ್ತದೆ ಒಂದಿಷ್ಟು ಜನಕ್ಕೆ ಅವಕಾಶ ಸಿಕ್ಕರೂ ಅವಮಾನ ಅಸಮಾನತೆಯ ಜಾತಿಯ ಮುಂದಿಟ್ಟು ಪ್ರಮುಖ ಹುದ್ದೆಗಳನ್ನು ತಪ್ಪಿಸಲಾಗುತ್ತಿದೆ ಜನಸಂಖ್ಯೆ ಮತ್ತು ಜಾತಿಯ ಆಧಾರದ ಮೂಲಕ ಚುನಾವಣಾ ಸ್ಥಾನಮಾನಗಳನ್ನು ಕೊಡಲಾಗುತ್ತಿದೆ ಹೊರತು ಸಣ್ಣ ಸಣ್ಣ ಸಮುದಾಯಗಳಿಗೆ ಅವಕಾಶಗಳಿಂದ ವಂಚಿತರಾಗುವಂತೆ ಮಾಡಿದ್ದಾರೆ ಮಡಿವಾಳ ಜನಾಂಗಕ್ಕೆ ಶಿಕ್ಷಣ ಮತ್ತು ಉದ್ಯೋಗವೇ ದಾರಿದ್ವೀಪವಾಗಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಸಮಾಜದಲ್ಲಿ ವೃತ್ತಿ ಮತ್ತು ಜಾತಿಗಳು ಅಸಮಾನತೆ, ಶೋಷಣೆ, ದಬ್ಬಾಳಿಕೆಗಳಿಂದ ಕಾಯಕ ಸಮುದಾಯಗಳಿಗೆ ಶಾಪವಾಗಿದೆ ಎಲ್ಲಾ ಸಮುದಾಯಗಳಲ್ಲಿ ಬಡವರು ಇದ್ದು ಅಂತವರಿಗೆ ಮೀಸಲಾತಿ ನೀಡಬೇಕು ಪ್ರತಿ ಸಮುದಾಯಕ್ಕೂ ನಿಗಮ ಮಾಡಿ ಒಂದಿಷ್ಟು ಅನುದಾನ ಅಂತ ಕೊಡುವುದು ಬಿಟ್ಟು ಸರಕಾರದ ಸಂಪುಟದ ಉಪಸಮಿತಿ ರಚನೆ ಮಾಡಿ ಅದರ ನೇತೃತ್ವದಲ್ಲಿ ಸಣ್ಣ ಸಣ್ಣ ಸಮುದಾಯಗಳ ಏಳಿಗೆಗಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ
ಮಡಿವಾಳ ಸಮುದಾಯದ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಮಂಜುನಾಥ್ ಮಾತನಾಡಿ, ಸಮುದಾಯದ ಪರವಾಗಿ ರಾಜಕೀಯವಾಗಿ ಧ್ವನಿ ಎತ್ತುವವರು ಇಲ್ಲವಾಗಿದೆ ಮಡಿವಾಳ ಸಮುದಾಯವು ಒಗ್ಗಟ್ಟನ್ನು ಪ್ರದರ್ಶಿಸಿ ರಾಜಕೀಯ ಶಕ್ತಿಯಾಗಿ ಗುರುತಿಸಿಕೊಳ್ಳಬೇಕು ವಿಧ್ಯಾರ್ಥಿಗಳು ಸತತ ಪ್ರಯತ್ನದಿಂದ ಉನ್ನತ ಸ್ಥಾನಮಾನ ಪಡೆದು ಸಮುದಾಯದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮಿಸಬೇಕು ಎಂದರು.

ವೇದಿಕೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಸಿ.ವಿ ವೆಂಕಟೇಶ್, ನಿವೃತ್ತ ಇಂಜಿನಿಯರ್ ನಾರಾಯಣಸ್ವಾಮಿ, ಕೆಜಿಎಫ್ ಆರ್.ಟಿ.ಒ ಶ್ರೀನಿವಾಸಮೂರ್ತಿ, ಸಮುದಾಯ ಮುಖಂಡರಾದ ಗಿರೀಶ್ ಬಾಬು, ಕೆ.ಎಂ ಕೃಷ್ಣಪ್ಪ, ವಿ.ಅಮರನಾಥ್, ಕೆ.ಸಿ ಮುಖೇಶ್, ಸುಬ್ರಮಣಿ, ಅಮರಾವತಿ ರಾಜಣ್ಣ, ಸೋಮಶೇಖರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

12 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

22 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago