ಕೋಲಾರ: ಸಮಾಜದಲ್ಲಿ ಶೋಷಿತ ಸಮುದಾಯಗಳಲ್ಲಿ ಮಡಿವಾಳ ಸಮುದಾಯವು ಒಂದಾಗಿದ್ದು ರಾಜಕೀಯ, ಶೈಕ್ಷಣಿಕ, ಆರ್ಥಿಕ ಸ್ಥಾನಮಾನಗಳಿಗಾಗಿ ಸರಕಾರವು ಸಮುದಾಯವನ್ನು ಪರಿಶಿಷ್ಟ ಜಾರಿಗೆ ಸೇರಿಸಬೇಕಾಗಿದೆ ಇದಕ್ಕೆ ಒಗ್ಗಟ್ಟಿನಿಂದ ಸರಕಾರದ ಮೇಲೆ ಒತ್ತಡ ಹಾಕಬೇಕಾಗಿದೆ ಎಂದು ಮುಖ್ಯಮಂತ್ರಿಗಳ ವೈದ್ಯಕೀಯ ಸಲಹೆಗಾರ ಡಾ.ಹೆಚ್ ರವಿಕುಮಾರ್ ಕರೆ ನೀಡಿದರು.
ನಗರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಡಿವಾಳ ಜನಾಂಗದ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 5 ಮತ್ತು 6ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸಮುದಾಯವಾಗಲಿ ರಾಜಕೀಯ ಶಕ್ತಿ ಇದ್ದರೆ ಅಷ್ಟೇ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಇವತ್ತಿನ ಮೂರು ರಾಜಕೀಯ ಪಕ್ಷಗಳಿಗೆ ಮಡಿವಾಳ ಸಮುದಾಯದ ಬಗ್ಗೆ ಕಾಳಜಿ ಮತ್ತು ಇಚ್ಛಾಶಕ್ತಿ ಕೊರತೆಯಾಗಿದೆ ನಾವು ಎಲ್ಲರೂ ಒಗ್ಗಟ್ಟು ಆಗದೆ ಹೋದರೆ ಮುಂದಿನ ದಿನಗಳಲ್ಲಿ ನಮಗೆಲ್ಲ ಉಳಿಗಾಲವಿಲ್ಲ ಎಂದರು.
ಸಮಾಜದಲ್ಲಿನ ಕೇವಲ ಅರ್ಹತೆಯ ಆಧಾರದ ಮೇಲೆ ನೌಕರಿ ಸಿಗುತ್ತದೆ ಒಂದಿಷ್ಟು ಜನಕ್ಕೆ ಅವಕಾಶ ಸಿಕ್ಕರೂ ಅವಮಾನ ಅಸಮಾನತೆಯ ಜಾತಿಯ ಮುಂದಿಟ್ಟು ಪ್ರಮುಖ ಹುದ್ದೆಗಳನ್ನು ತಪ್ಪಿಸಲಾಗುತ್ತಿದೆ ಜನಸಂಖ್ಯೆ ಮತ್ತು ಜಾತಿಯ ಆಧಾರದ ಮೂಲಕ ಚುನಾವಣಾ ಸ್ಥಾನಮಾನಗಳನ್ನು ಕೊಡಲಾಗುತ್ತಿದೆ ಹೊರತು ಸಣ್ಣ ಸಣ್ಣ ಸಮುದಾಯಗಳಿಗೆ ಅವಕಾಶಗಳಿಂದ ವಂಚಿತರಾಗುವಂತೆ ಮಾಡಿದ್ದಾರೆ ಮಡಿವಾಳ ಜನಾಂಗಕ್ಕೆ ಶಿಕ್ಷಣ ಮತ್ತು ಉದ್ಯೋಗವೇ ದಾರಿದ್ವೀಪವಾಗಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಸಮಾಜದಲ್ಲಿ ವೃತ್ತಿ ಮತ್ತು ಜಾತಿಗಳು ಅಸಮಾನತೆ, ಶೋಷಣೆ, ದಬ್ಬಾಳಿಕೆಗಳಿಂದ ಕಾಯಕ ಸಮುದಾಯಗಳಿಗೆ ಶಾಪವಾಗಿದೆ ಎಲ್ಲಾ ಸಮುದಾಯಗಳಲ್ಲಿ ಬಡವರು ಇದ್ದು ಅಂತವರಿಗೆ ಮೀಸಲಾತಿ ನೀಡಬೇಕು ಪ್ರತಿ ಸಮುದಾಯಕ್ಕೂ ನಿಗಮ ಮಾಡಿ ಒಂದಿಷ್ಟು ಅನುದಾನ ಅಂತ ಕೊಡುವುದು ಬಿಟ್ಟು ಸರಕಾರದ ಸಂಪುಟದ ಉಪಸಮಿತಿ ರಚನೆ ಮಾಡಿ ಅದರ ನೇತೃತ್ವದಲ್ಲಿ ಸಣ್ಣ ಸಣ್ಣ ಸಮುದಾಯಗಳ ಏಳಿಗೆಗಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವಂತಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ
ಮಡಿವಾಳ ಸಮುದಾಯದ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಮಂಜುನಾಥ್ ಮಾತನಾಡಿ, ಸಮುದಾಯದ ಪರವಾಗಿ ರಾಜಕೀಯವಾಗಿ ಧ್ವನಿ ಎತ್ತುವವರು ಇಲ್ಲವಾಗಿದೆ ಮಡಿವಾಳ ಸಮುದಾಯವು ಒಗ್ಗಟ್ಟನ್ನು ಪ್ರದರ್ಶಿಸಿ ರಾಜಕೀಯ ಶಕ್ತಿಯಾಗಿ ಗುರುತಿಸಿಕೊಳ್ಳಬೇಕು ವಿಧ್ಯಾರ್ಥಿಗಳು ಸತತ ಪ್ರಯತ್ನದಿಂದ ಉನ್ನತ ಸ್ಥಾನಮಾನ ಪಡೆದು ಸಮುದಾಯದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮಿಸಬೇಕು ಎಂದರು.
ವೇದಿಕೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಸಿ.ವಿ ವೆಂಕಟೇಶ್, ನಿವೃತ್ತ ಇಂಜಿನಿಯರ್ ನಾರಾಯಣಸ್ವಾಮಿ, ಕೆಜಿಎಫ್ ಆರ್.ಟಿ.ಒ ಶ್ರೀನಿವಾಸಮೂರ್ತಿ, ಸಮುದಾಯ ಮುಖಂಡರಾದ ಗಿರೀಶ್ ಬಾಬು, ಕೆ.ಎಂ ಕೃಷ್ಣಪ್ಪ, ವಿ.ಅಮರನಾಥ್, ಕೆ.ಸಿ ಮುಖೇಶ್, ಸುಬ್ರಮಣಿ, ಅಮರಾವತಿ ರಾಜಣ್ಣ, ಸೋಮಶೇಖರ್, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…