Categories: ಕೋಲಾರ

ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಒತ್ತಾಯಕ್ಕೆ ಧ್ವನಿಯಾಗಿ-ರವಿಕುಮಾರ್

ಕೋಲಾರ: ಸಮಾಜದಲ್ಲಿ ಶೋಷಿತ ಸಮುದಾಯಗಳಲ್ಲಿ ಮಡಿವಾಳ ಸಮುದಾಯವು ಒಂದಾಗಿದ್ದು ರಾಜಕೀಯ, ಶೈಕ್ಷಣಿಕ, ಆರ್ಥಿಕ ಸ್ಥಾನಮಾನಗಳಿಗಾಗಿ ಸರಕಾರವು ಸಮುದಾಯವನ್ನು ಪರಿಶಿಷ್ಟ ಜಾರಿಗೆ ಸೇರಿಸಬೇಕಾಗಿದೆ ಇದಕ್ಕೆ ಒಗ್ಗಟ್ಟಿನಿಂದ ಸರಕಾರದ ಮೇಲೆ ಒತ್ತಡ ಹಾಕಬೇಕಾಗಿದೆ ಎಂದು ಮುಖ್ಯಮಂತ್ರಿಗಳ ವೈದ್ಯಕೀಯ ಸಲಹೆಗಾರ ಡಾ.ಹೆಚ್ ರವಿಕುಮಾರ್ ಕರೆ ನೀಡಿದರು.

ನಗರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಡಿವಾಳ ಜನಾಂಗದ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 5 ಮತ್ತು 6ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸಮುದಾಯವಾಗಲಿ ರಾಜಕೀಯ ಶಕ್ತಿ ಇದ್ದರೆ ಅಷ್ಟೇ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಇವತ್ತಿನ ಮೂರು ರಾಜಕೀಯ ಪಕ್ಷಗಳಿಗೆ ಮಡಿವಾಳ ಸಮುದಾಯದ ಬಗ್ಗೆ ಕಾಳಜಿ ಮತ್ತು ಇಚ್ಛಾಶಕ್ತಿ ಕೊರತೆಯಾಗಿದೆ ನಾವು ಎಲ್ಲರೂ ಒಗ್ಗಟ್ಟು ಆಗದೆ ಹೋದರೆ ಮುಂದಿನ ದಿನಗಳಲ್ಲಿ ನಮಗೆಲ್ಲ ಉಳಿಗಾಲವಿಲ್ಲ ಎಂದರು.

ಸಮಾಜದಲ್ಲಿನ ಕೇವಲ ಅರ್ಹತೆಯ ಆಧಾರದ ಮೇಲೆ ನೌಕರಿ ಸಿಗುತ್ತದೆ ಒಂದಿಷ್ಟು ಜನಕ್ಕೆ ಅವಕಾಶ ಸಿಕ್ಕರೂ ಅವಮಾನ ಅಸಮಾನತೆಯ ಜಾತಿಯ ಮುಂದಿಟ್ಟು ಪ್ರಮುಖ ಹುದ್ದೆಗಳನ್ನು ತಪ್ಪಿಸಲಾಗುತ್ತಿದೆ ಜನಸಂಖ್ಯೆ ಮತ್ತು ಜಾತಿಯ ಆಧಾರದ ಮೂಲಕ ಚುನಾವಣಾ ಸ್ಥಾನಮಾನಗಳನ್ನು ಕೊಡಲಾಗುತ್ತಿದೆ ಹೊರತು ಸಣ್ಣ ಸಣ್ಣ ಸಮುದಾಯಗಳಿಗೆ ಅವಕಾಶಗಳಿಂದ ವಂಚಿತರಾಗುವಂತೆ ಮಾಡಿದ್ದಾರೆ ಮಡಿವಾಳ ಜನಾಂಗಕ್ಕೆ ಶಿಕ್ಷಣ ಮತ್ತು ಉದ್ಯೋಗವೇ ದಾರಿದ್ವೀಪವಾಗಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಸಮಾಜದಲ್ಲಿ ವೃತ್ತಿ ಮತ್ತು ಜಾತಿಗಳು ಅಸಮಾನತೆ, ಶೋಷಣೆ, ದಬ್ಬಾಳಿಕೆಗಳಿಂದ ಕಾಯಕ ಸಮುದಾಯಗಳಿಗೆ ಶಾಪವಾಗಿದೆ ಎಲ್ಲಾ ಸಮುದಾಯಗಳಲ್ಲಿ ಬಡವರು ಇದ್ದು ಅಂತವರಿಗೆ ಮೀಸಲಾತಿ ನೀಡಬೇಕು ಪ್ರತಿ ಸಮುದಾಯಕ್ಕೂ ನಿಗಮ ಮಾಡಿ ಒಂದಿಷ್ಟು ಅನುದಾನ ಅಂತ ಕೊಡುವುದು ಬಿಟ್ಟು ಸರಕಾರದ ಸಂಪುಟದ ಉಪಸಮಿತಿ ರಚನೆ ಮಾಡಿ ಅದರ ನೇತೃತ್ವದಲ್ಲಿ ಸಣ್ಣ ಸಣ್ಣ ಸಮುದಾಯಗಳ ಏಳಿಗೆಗಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ
ಮಡಿವಾಳ ಸಮುದಾಯದ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಮಂಜುನಾಥ್ ಮಾತನಾಡಿ, ಸಮುದಾಯದ ಪರವಾಗಿ ರಾಜಕೀಯವಾಗಿ ಧ್ವನಿ ಎತ್ತುವವರು ಇಲ್ಲವಾಗಿದೆ ಮಡಿವಾಳ ಸಮುದಾಯವು ಒಗ್ಗಟ್ಟನ್ನು ಪ್ರದರ್ಶಿಸಿ ರಾಜಕೀಯ ಶಕ್ತಿಯಾಗಿ ಗುರುತಿಸಿಕೊಳ್ಳಬೇಕು ವಿಧ್ಯಾರ್ಥಿಗಳು ಸತತ ಪ್ರಯತ್ನದಿಂದ ಉನ್ನತ ಸ್ಥಾನಮಾನ ಪಡೆದು ಸಮುದಾಯದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮಿಸಬೇಕು ಎಂದರು.

ವೇದಿಕೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ಸಿ.ವಿ ವೆಂಕಟೇಶ್, ನಿವೃತ್ತ ಇಂಜಿನಿಯರ್ ನಾರಾಯಣಸ್ವಾಮಿ, ಕೆಜಿಎಫ್ ಆರ್.ಟಿ.ಒ ಶ್ರೀನಿವಾಸಮೂರ್ತಿ, ಸಮುದಾಯ ಮುಖಂಡರಾದ ಗಿರೀಶ್ ಬಾಬು, ಕೆ.ಎಂ ಕೃಷ್ಣಪ್ಪ, ವಿ.ಅಮರನಾಥ್, ಕೆ.ಸಿ ಮುಖೇಶ್, ಸುಬ್ರಮಣಿ, ಅಮರಾವತಿ ರಾಜಣ್ಣ, ಸೋಮಶೇಖರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

3 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

3 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

6 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

8 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

20 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

20 hours ago