ಮಣಿಪಾಲ್ ಆಸ್ಪತ್ರೆಯಲ್ಲಿ ಮೂತ್ರಪಿಂಡ (ಕಿಡ್ನಿ) ಆರೋಗ್ಯ ಕುರಿತು ಜಾಗೃತಿ

ಮೂತ್ರಪಿಂಡ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಲುವಾಗಿ, ಮಣಿಪಾಲ್ ಆಸ್ಪತ್ರೆಗಳು ಸೃಜನಾತ್ಮಕ ಕಾರ್ಯಕ್ರಮಗಳು ಮತ್ತು ಸಮುದಾಯದ ತೊಡಗಿಸುವಿಕೆಯ ಮೂಲಕ ಮೂತ್ರಪಿಂಡದ ಆರೋಗ್ಯವನ್ನು ಉತ್ತೇಜಿಸುವಲ್ಲಿ ಮುಂಚೂಣಿಯಲ್ಲಿದೆ ಎಂದು ವೈದ್ಯರಾದ ಡಾ. ಕತುಲಪಲಿ ಕೃಷ್ಣ ತಿಳಿಸಿದರು.

ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ “ಮೂತ್ರಪಿಂಡ ಜಾಗೃತಿ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೂತ್ರಪಿಂಡಗಳು ಮೂತ್ರ ವ್ಯವಸ್ಥೆಯ ಪ್ರಮುಖ ಅಂಗಗಳಾಗಿದ್ದು, ತ್ಯಾಜ್ಯವನ್ನು ಶೋಧಿಸುವ ಮೂಲಕ ಮತ್ತು ದ್ರವಗಳನ್ನು ಸಮತೋಲನಗೊಳಿಸುವ ಮೂಲಕ ನಮ್ಮ ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಮೂತ್ರಪಿಂಡಗಳು ರಕ್ತದಿಂದ ವಿಷ ಮತ್ತು ಹೆಚ್ಚುವರಿ ನೀರನ್ನು ಶೋಧಿಸಿ, ಅವುಗಳನ್ನು ಮೂತ್ರವಾಗಿ ಪರಿವರ್ತಿಸಿ ಹೊರಹಾಕುತ್ತವೆ ಎಂದರು.

ರಕ್ತವನ್ನು ಶುದ್ಧೀಕರಿಸುವುದರ ಜೊತೆಗೆ, ಮೂತ್ರಪಿಂಡಗಳು ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತವೆ ಮತ್ತು ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ಉತ್ತೇಜಿಸುತ್ತವೆ. ಮೂತ್ರಪಿಂಡದ ಕಾರ್ಯದಲ್ಲಿನ ದುರ್ಬಲತೆಯು ಮೂತ್ರಪಿಂಡದ ಕಾಯಿಲೆಗೆ ಕಾರಣವಾಗಬಹುದು ಎಂದು ತಿಳಿಸಿದರು.

ಜಾಗತಿಕವಾಗಿ, ಲಕ್ಷಾಂತರ ಜನರು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ ಮತ್ತು ಮೂತ್ರಪಿಂಡದ ಆರೋಗ್ಯವನ್ನು ರಕ್ಷಿಸಲು ನಿಯಮಿತ ತಪಾಸಣೆ ಮತ್ತು ಆರಂಭಿಕ ಪತ್ತೆ ಬಗ್ಗೆ ಜಾಗೃತಿ ಮೂಡಿಸುವುದು ಬಹಳ ಮುಖ್ಯ ಎಂದು ಸೂಚಿಸಿದರು.

ನಂತರ ಡಾ. ಶಿವಾನಂದ ಬಿ.ಎನ್ ಮಾತನಾಡಿ, ಮನುಷ್ಯನಿಗೆ ಕಾಯಿಲೆಗಳು ಯಾವಾಗಲೂ ಹೇಳಿಕೇಳಿ ಬರುವುದಿಲ್ಲ. ಕೆಲವೊಂದು ಕಾಯಿಲೆಯ ರೋಗಲಕ್ಷಣಗಳು ನಮ್ಮ ದೇಹವನ್ನು ಸೇರಿಕೊಂಡು, ಏನಾದರೂ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಿದಾಗ ಬಳಿಕವಷ್ಟೇ ನಮಗೆ ಆ ಕಾಯಿಲೆಯ ಬಗ್ಗೆ ತಿಳಿಯುವುದು. ಆದರೆ, ಹೆಚ್ಚಿನವರು ಇಂತಹ ಅನಾರೋಗ್ಯದ ಲಕ್ಷಣಗಳನ್ನು ಕಡೆಗಣಿಸುತ್ತಾರೆ ಅಥವಾ ಯಾವುದೋ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳು ಇರಬಹುದೇನೋ ಎಂದು ಸಮ್ಮನಿರುವುದರಿಂದ, ಮುಂದಿನ ದಿನಗಳಲ್ಲಿ ದೊಡ್ಡ ರೀತಿಯ ಆರೋಗ್ಯಕ್ಕೆ ಸಮಸ್ಯೆ ಆಗುವ ಸಾಧ್ಯತೆ ಇರತ್ತದೆ. ಉದಾಹರಣೆಗೆ ಹೇಳುವುದಾದರೆ ಕಿಡ್ನಿ ಸಮಸ್ಯೆಯ ರೋಗಲಕ್ಷಣಗಳು ಎಂದರು.

ಮೂತ್ರಪಿಂಡ ಕಾಯಿಲೆಯ ಲಕ್ಷಣಗಳು
ಮೂತ್ರಪಿಂಡದ ಕಾಯಿಲೆಗಳ ಲಕ್ಷಣಗಳು ನಿರ್ದಿಷ್ಟ ಪರಿಸ್ಥಿತಿಗಳಿಗೆ ಅನುಗುಣವಾಗಿ ಬದಲಾಗುತ್ತವೆ. ಕೆಲವು ಲಕ್ಷಣಗಳು ಇಲ್ಲಿವೆ:

ಹಸಿವಿನ ಕೊರತೆ
ಆಯಾಸ
ವಾಕರಿಕೆ ಮತ್ತು ವಾಂತಿ
ಗೊಂದಲಗಳು
ನೋವಿನ ಅಥವಾ ಆಗಾಗ್ಗೆ ಮೂತ್ರ ವಿಸರ್ಜನೆ
ಕಣಕಾಲುಗಳ ಊತ
ಸೆಳೆತ
ಮೂತ್ರದಲ್ಲಿ ರಕ್ತ
ತುರಿಕೆ ಚರ್ಮ
ಹಸಿವು ಕಡಿಮೆಯಾಗುವುದು
ಆಗಾಗ್ಗೆ ಮೂತ್ರ ವಿಸರ್ಜನೆ
ನೊರೆ ಮೂತ್ರ

ಮೂತ್ರಪಿಂಡ ಕಾಯಿಲೆಗೆ ಕಾರಣಗಳು

ಮೂತ್ರಪಿಂಡದ ಕಾಯಿಲೆಯ ಕಾರಣಗಳು ಈ ಕೆಳಗಿನಂತಿವೆ:

ಮಧುಮೇಹ
ಮೂತ್ರಕೋಶದ ಡೈವರ್ಟಿಕ್ಯುಲಾ
ನಿರ್ಜಲೀಕರಣ
ವಿಸ್ತರಿಸಿದ ಪ್ರಾಸ್ಟೇಟ್
ನರಜನಕ ಮೂತ್ರಕೋಶ
ಗ್ಲೋಮೆರುಲೋನೆಫ್ರಿಟಿಸ್
ಪಾಲಿಸಿಸ್ಟಿಕ್ ಮೂತ್ರಪಿಂಡ ಕಾಯಿಲೆ
ಮೂತ್ರಪಿಂಡದ ಸೋಂಕು
ನೆಫ್ರೋಟಿಕ್ ಸಿಂಡ್ರೋಮ್
ವರ್ಧನೆ ಸಿಸ್ಟೊಪ್ಲ್ಯಾಸ್ಟಿ

ಮೂತ್ರಪಿಂಡ ಕಾಯಿಲೆಯ ತೊಡಕುಗಳು
ಮೂತ್ರಪಿಂಡದ ಕಾಯಿಲೆಗಳಿಗೆ ಚಿಕಿತ್ಸೆ ನೀಡದಿದ್ದರೆ, ಅವು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಾಗಿ ಬದಲಾಗಬಹುದು, ಇದು ಅನೇಕ ತೊಡಕುಗಳಿಗೆ ಕಾರಣವಾಗಬಹುದು. ಅವುಗಳಲ್ಲಿ ಕೆಲವು ಸೇರಿವೆ:

ರಕ್ತಹೀನತೆ
ದುರ್ಬಲ ಮೂಳೆಗಳು
ಅಧಿಕ ರಕ್ತದೊತ್ತಡ
ನರ ಹಾನಿ
ಇತ್ಯಾದಿ…

Ramesh Babu

Journalist

Recent Posts

DRI ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ಕ್ಯಾಪ್ಸೂಲ್ ರೂಪದಲ್ಲಿ ಚಿನ್ನ ಸಾಗಾಟ: 5 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ವಶ

DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…

37 minutes ago

ಭ್ರಷ್ಟ ಅಧಿಕಾರಿ ಮನೆಯಲ್ಲಿ ಲೋಕಾ ತಲಾಶ್: ಆದಾಯ ಮೀರಿದ ಶೇ 120ರಷ್ಟು ಆಸ್ತಿ ಪತ್ತೆ

ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…

48 minutes ago

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

11 hours ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

14 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

16 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

23 hours ago