Categories: ಕೋಲಾರ

ಮಣ್ಣಿನ ವಸ್ತುಗಳ ತಯಾರಿಕೆಯಿಂದ ಹಳ್ಳಿ ಜನರ ಉದ್ಯೋಗಕ್ಕೆ ಸಹಕಾರಿ: ಮಹಿಮಾ ಪಟೇಲ್

ಮಣ್ಣಿನಿಂದ ತಯಾರಿಸಿದ ವಸ್ತುಗಳಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಜೊತೆಗೆ ಪರಿಸರಕ್ಕೂ ಪ್ರಯೋಜನಕಾರಿ ಹೆಚ್ಚಾಗಿ ಮಣ್ಣಿನ ವಸ್ತುಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಜೆಡಿಯು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ತಿಳಿಸಿದರು.

ತಾಲೂಕಿನ ಕಲ್ಲಂಡೂರು ಗ್ರಾಮದಲ್ಲಿನ ಡಾ.ಕೆ.ನಾಗರಾಜ್ ಅವರ ಪ್ರೋಟರಿ ಕ್ಲಸ್ಟರ್ ಗೆ ಮಂಗಳವಾರ ಭೇಟಿ ನೀಡಿ ಮಣ್ಣಿನಿಂದ ತಯಾರಿಸಿದ ವಸ್ತುಗಳನ್ನು ವೀಕ್ಷಿಸಿ ಮಾತನಾಡಿದ ಅವರು ಪ್ಲಾಸ್ಟಿಕ್‌ ಹಾಗೂ ಗಾಜಿನಿಂದ ತಯಾರಿಸಿದ ಲೋಟ, ತಟ್ಟೆಗಳಲ್ಲಿ ವಿಷಕಾರಿ ರಾಸಾಯನಿಕ ಅಂಶವಿರುತ್ತದೆ. ಈ ಅಂಶವು ನಮಗೆ ಗೊತ್ತಿಲ್ಲದೆ ಊಟದ ಜತೆ ದೇಹ ಸೇರಿ ಆರೋಗ್ಯ ಕೆಡಿಸುತ್ತದೆ. ಪೂರ್ವಜರು ಮಣ್ಣಿನಿಂದ ಮಾಡಿದ ಮಡಿಕೆ, ಕುಡಿಕೆಗಳನ್ನೇ ಪಾತ್ರೆಗಳಾಗಿ ಬಳಸಿ ಆರೋಗ್ಯವಂತರಾಗಿರುತ್ತಿದ್ದರು. ಮಡಿಕೆ, ಕುಡಿಕೆ ಬಳಸುವ ಮೂಲಕ ಕುಂಬಾರಿಕೆ ವೃತ್ತಿಯನ್ನು ಉತ್ತೇಜಿಸಿದಂತೆ ಆಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸುಳ್ಳು, ಮೋಸ, ಭ್ರಷ್ಟಾಚಾರದ ರಾಜಕಾರಣ ಜಾಸ್ತಿಯಾಗಿದೆ ಸಾವಯವ ರಾಜಕಾರಣದ ಚಿಂತನೆಯಡಿ ಬದಲಾವಣೆಗೆ ನಾವು ಎಲ್ಲರೂ ಪ್ರಯತ್ನ ಮಾಡಲಾಗುತ್ತಿದೆ. ಸಕರಾತ್ಮಕ ಆಲೋಚನೆಗಳಿಂದ ರಾಜಕಾರಣವನ್ನು ಕಟ್ಟುವ ಕೆಲಸ ಆಗಬೇಕಿದೆ ಬಹುತೇಕರಲ್ಲಿ ಇವತ್ತಿನ ರಾಜಕಾರಣದ ಬಗ್ಗೆ ಬೇಸರವಿದೆ. ಬದ್ಧತೆಯುಳ್ಳ ರಾಜಕಾರಣದ ಅಗತ್ಯವಿದೆ ಎಂಬ ಮನಸಿದೆ. ಹೃದಯಕ್ಕೆ ಬೇಕಾದ ರಾಜಕಾರಣವನ್ನು ಜನರು ಆಯ್ಕೆ ಮಾಡಿಕೊಳ್ಳಬೇಕಿದ್ದು, ಕೆಟ್ಟದನ್ನು ದೂರ ಮಾಡಬೇಕು ಇದಕ್ಕೆ ಜನರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಹಾಗೂ ಕುಂಬಾರ ಸಮುದಾಯದ ಮುಖಂಡ ಡಾ.ಕೆ.ನಾಗರಾಜ್ ಮಾತನಾಡಿ ಇತ್ತೀಚೆಗೆ ಅಲ್ಯೂಮಿನಿಯಂ, ಸ್ಟೀಲ್‌ ಪಾತ್ರೆಗಳ ಹಾವಳಿಯಿಂದಾಗಿ ವಂಶಪಾರಂಪರ್ಯವಾಗಿ ಕುಲಕಸುಬಾಗಿ ಮಾಡಿಕೊಂಡು ಬಂದಿರುವ ಕುಂಬಾರಿಕೆ ವೃತ್ತಿಗೆ ತೊಡಕುಂಟಾಗುತ್ತಿದೆ. ಮಣ್ಣಿನ ಪಾತ್ರೆಯಲ್ಲಿ ಬೇಯಿಸಿದ ಬಗೆ ಬಗೆಯ ಪದಾರ್ಥಗಳು ಹೆಚ್ಚು ರುಚಿಕರ ಹಾಗೂ ಆರೋಗ್ಯಕ್ಕೂ ಪೂರಕವಾಗಿತ್ತು. ಅಂದಿನ ದಿನಗಳಲ್ಲಿ ಮಣ್ಣಿನಿಂದ ಮಾಡಿದ ಉತ್ಪನ್ನಗಳಿಗೆ ಎಲ್ಲಿಲ್ಲದ ಬೇಡಿಕೆಯಿತ್ತು. ಪ್ರಸ್ತುತ ಬಹುತೇಕ ಜನರು ಅಲ್ಯೂಮಿನಿಯಂ, ಸ್ಟೀಲ್‌ ಪಾತ್ರೆ ಖರೀದಿಗೆ ಮಾರುಹೋಗುತ್ತಿದ್ದಾರೆ. ಆದರೂ ಕಲ್ಲಂಡೂರು ಗ್ರಾಮದ ಕ್ಲಸ್ಟರ್ ನಲ್ಲಿ ಮಣ್ಣಿನಲ್ಲಿ ಮಡಕೆ ಲೋಟ ಇತ್ಯಾದಿ ತಯಾರಿಸುವ ಕುಂಬಾರ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಾ ಇದ್ದೇವೆ ಎಂದರು.

ಸಮಾಜದಲ್ಲಿ ದಿನದಿಂದ ದಿನಕ್ಕೆ ಕುಂಬಾರ ವೃತ್ತಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮುದಾಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ಬಳಸಿಕೊಂಡು ಸ್ವಾವಲಂಬನೆ ಸಾಧಿಸುವಂತೆ ಆಗಬೇಕು ಮಣ್ಣಿನಿಂದ ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ವ್ಯವಸ್ಥೆ ಸಹ ಮಾಡಲಾಗುತ್ತದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶಶಿಕುಮಾರ್ ಗೌಡ, ಸೂರ್ಯಪ್ರಕಾಶ್ ಮಹಡಿ, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಎಂ.ಡಿ ಕಲಾವತಿ, ಉಪಾಧ್ಯಕ್ಷೆ ಶಾಂತಕುಮಾರಿ,  ರೈತ ಘಟಕದ ಅಧ್ಯಕ್ಷ ಡಿ.ಕೆ ಶ್ರೀನಿವಾಸ್, ಮುಖಂಡರಾದ ಚಂದ್ರಶೇಖರ್, ಪ್ರಭು, ಗಂಗರಾಜು, ಮುಂತಾದವರು ಇದ್ದರು

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

5 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

6 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

12 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

13 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

18 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago