Categories: ಕೋಲಾರ

ಮಣ್ಣಿನ ವಸ್ತುಗಳ ತಯಾರಿಕೆಯಿಂದ ಹಳ್ಳಿ ಜನರ ಉದ್ಯೋಗಕ್ಕೆ ಸಹಕಾರಿ: ಮಹಿಮಾ ಪಟೇಲ್

ಮಣ್ಣಿನಿಂದ ತಯಾರಿಸಿದ ವಸ್ತುಗಳಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಜೊತೆಗೆ ಪರಿಸರಕ್ಕೂ ಪ್ರಯೋಜನಕಾರಿ ಹೆಚ್ಚಾಗಿ ಮಣ್ಣಿನ ವಸ್ತುಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಜೆಡಿಯು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ತಿಳಿಸಿದರು.

ತಾಲೂಕಿನ ಕಲ್ಲಂಡೂರು ಗ್ರಾಮದಲ್ಲಿನ ಡಾ.ಕೆ.ನಾಗರಾಜ್ ಅವರ ಪ್ರೋಟರಿ ಕ್ಲಸ್ಟರ್ ಗೆ ಮಂಗಳವಾರ ಭೇಟಿ ನೀಡಿ ಮಣ್ಣಿನಿಂದ ತಯಾರಿಸಿದ ವಸ್ತುಗಳನ್ನು ವೀಕ್ಷಿಸಿ ಮಾತನಾಡಿದ ಅವರು ಪ್ಲಾಸ್ಟಿಕ್‌ ಹಾಗೂ ಗಾಜಿನಿಂದ ತಯಾರಿಸಿದ ಲೋಟ, ತಟ್ಟೆಗಳಲ್ಲಿ ವಿಷಕಾರಿ ರಾಸಾಯನಿಕ ಅಂಶವಿರುತ್ತದೆ. ಈ ಅಂಶವು ನಮಗೆ ಗೊತ್ತಿಲ್ಲದೆ ಊಟದ ಜತೆ ದೇಹ ಸೇರಿ ಆರೋಗ್ಯ ಕೆಡಿಸುತ್ತದೆ. ಪೂರ್ವಜರು ಮಣ್ಣಿನಿಂದ ಮಾಡಿದ ಮಡಿಕೆ, ಕುಡಿಕೆಗಳನ್ನೇ ಪಾತ್ರೆಗಳಾಗಿ ಬಳಸಿ ಆರೋಗ್ಯವಂತರಾಗಿರುತ್ತಿದ್ದರು. ಮಡಿಕೆ, ಕುಡಿಕೆ ಬಳಸುವ ಮೂಲಕ ಕುಂಬಾರಿಕೆ ವೃತ್ತಿಯನ್ನು ಉತ್ತೇಜಿಸಿದಂತೆ ಆಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸುಳ್ಳು, ಮೋಸ, ಭ್ರಷ್ಟಾಚಾರದ ರಾಜಕಾರಣ ಜಾಸ್ತಿಯಾಗಿದೆ ಸಾವಯವ ರಾಜಕಾರಣದ ಚಿಂತನೆಯಡಿ ಬದಲಾವಣೆಗೆ ನಾವು ಎಲ್ಲರೂ ಪ್ರಯತ್ನ ಮಾಡಲಾಗುತ್ತಿದೆ. ಸಕರಾತ್ಮಕ ಆಲೋಚನೆಗಳಿಂದ ರಾಜಕಾರಣವನ್ನು ಕಟ್ಟುವ ಕೆಲಸ ಆಗಬೇಕಿದೆ ಬಹುತೇಕರಲ್ಲಿ ಇವತ್ತಿನ ರಾಜಕಾರಣದ ಬಗ್ಗೆ ಬೇಸರವಿದೆ. ಬದ್ಧತೆಯುಳ್ಳ ರಾಜಕಾರಣದ ಅಗತ್ಯವಿದೆ ಎಂಬ ಮನಸಿದೆ. ಹೃದಯಕ್ಕೆ ಬೇಕಾದ ರಾಜಕಾರಣವನ್ನು ಜನರು ಆಯ್ಕೆ ಮಾಡಿಕೊಳ್ಳಬೇಕಿದ್ದು, ಕೆಟ್ಟದನ್ನು ದೂರ ಮಾಡಬೇಕು ಇದಕ್ಕೆ ಜನರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಹಾಗೂ ಕುಂಬಾರ ಸಮುದಾಯದ ಮುಖಂಡ ಡಾ.ಕೆ.ನಾಗರಾಜ್ ಮಾತನಾಡಿ ಇತ್ತೀಚೆಗೆ ಅಲ್ಯೂಮಿನಿಯಂ, ಸ್ಟೀಲ್‌ ಪಾತ್ರೆಗಳ ಹಾವಳಿಯಿಂದಾಗಿ ವಂಶಪಾರಂಪರ್ಯವಾಗಿ ಕುಲಕಸುಬಾಗಿ ಮಾಡಿಕೊಂಡು ಬಂದಿರುವ ಕುಂಬಾರಿಕೆ ವೃತ್ತಿಗೆ ತೊಡಕುಂಟಾಗುತ್ತಿದೆ. ಮಣ್ಣಿನ ಪಾತ್ರೆಯಲ್ಲಿ ಬೇಯಿಸಿದ ಬಗೆ ಬಗೆಯ ಪದಾರ್ಥಗಳು ಹೆಚ್ಚು ರುಚಿಕರ ಹಾಗೂ ಆರೋಗ್ಯಕ್ಕೂ ಪೂರಕವಾಗಿತ್ತು. ಅಂದಿನ ದಿನಗಳಲ್ಲಿ ಮಣ್ಣಿನಿಂದ ಮಾಡಿದ ಉತ್ಪನ್ನಗಳಿಗೆ ಎಲ್ಲಿಲ್ಲದ ಬೇಡಿಕೆಯಿತ್ತು. ಪ್ರಸ್ತುತ ಬಹುತೇಕ ಜನರು ಅಲ್ಯೂಮಿನಿಯಂ, ಸ್ಟೀಲ್‌ ಪಾತ್ರೆ ಖರೀದಿಗೆ ಮಾರುಹೋಗುತ್ತಿದ್ದಾರೆ. ಆದರೂ ಕಲ್ಲಂಡೂರು ಗ್ರಾಮದ ಕ್ಲಸ್ಟರ್ ನಲ್ಲಿ ಮಣ್ಣಿನಲ್ಲಿ ಮಡಕೆ ಲೋಟ ಇತ್ಯಾದಿ ತಯಾರಿಸುವ ಕುಂಬಾರ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಾ ಇದ್ದೇವೆ ಎಂದರು.

ಸಮಾಜದಲ್ಲಿ ದಿನದಿಂದ ದಿನಕ್ಕೆ ಕುಂಬಾರ ವೃತ್ತಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮುದಾಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ಬಳಸಿಕೊಂಡು ಸ್ವಾವಲಂಬನೆ ಸಾಧಿಸುವಂತೆ ಆಗಬೇಕು ಮಣ್ಣಿನಿಂದ ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ವ್ಯವಸ್ಥೆ ಸಹ ಮಾಡಲಾಗುತ್ತದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶಶಿಕುಮಾರ್ ಗೌಡ, ಸೂರ್ಯಪ್ರಕಾಶ್ ಮಹಡಿ, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಎಂ.ಡಿ ಕಲಾವತಿ, ಉಪಾಧ್ಯಕ್ಷೆ ಶಾಂತಕುಮಾರಿ,  ರೈತ ಘಟಕದ ಅಧ್ಯಕ್ಷ ಡಿ.ಕೆ ಶ್ರೀನಿವಾಸ್, ಮುಖಂಡರಾದ ಚಂದ್ರಶೇಖರ್, ಪ್ರಭು, ಗಂಗರಾಜು, ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

22 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago