Categories: ಕೋಲಾರ

ಮಣ್ಣಿನ ವಸ್ತುಗಳ ತಯಾರಿಕೆಯಿಂದ ಹಳ್ಳಿ ಜನರ ಉದ್ಯೋಗಕ್ಕೆ ಸಹಕಾರಿ: ಮಹಿಮಾ ಪಟೇಲ್

ಮಣ್ಣಿನಿಂದ ತಯಾರಿಸಿದ ವಸ್ತುಗಳಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಜೊತೆಗೆ ಪರಿಸರಕ್ಕೂ ಪ್ರಯೋಜನಕಾರಿ ಹೆಚ್ಚಾಗಿ ಮಣ್ಣಿನ ವಸ್ತುಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಜೆಡಿಯು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ತಿಳಿಸಿದರು.

ತಾಲೂಕಿನ ಕಲ್ಲಂಡೂರು ಗ್ರಾಮದಲ್ಲಿನ ಡಾ.ಕೆ.ನಾಗರಾಜ್ ಅವರ ಪ್ರೋಟರಿ ಕ್ಲಸ್ಟರ್ ಗೆ ಮಂಗಳವಾರ ಭೇಟಿ ನೀಡಿ ಮಣ್ಣಿನಿಂದ ತಯಾರಿಸಿದ ವಸ್ತುಗಳನ್ನು ವೀಕ್ಷಿಸಿ ಮಾತನಾಡಿದ ಅವರು ಪ್ಲಾಸ್ಟಿಕ್‌ ಹಾಗೂ ಗಾಜಿನಿಂದ ತಯಾರಿಸಿದ ಲೋಟ, ತಟ್ಟೆಗಳಲ್ಲಿ ವಿಷಕಾರಿ ರಾಸಾಯನಿಕ ಅಂಶವಿರುತ್ತದೆ. ಈ ಅಂಶವು ನಮಗೆ ಗೊತ್ತಿಲ್ಲದೆ ಊಟದ ಜತೆ ದೇಹ ಸೇರಿ ಆರೋಗ್ಯ ಕೆಡಿಸುತ್ತದೆ. ಪೂರ್ವಜರು ಮಣ್ಣಿನಿಂದ ಮಾಡಿದ ಮಡಿಕೆ, ಕುಡಿಕೆಗಳನ್ನೇ ಪಾತ್ರೆಗಳಾಗಿ ಬಳಸಿ ಆರೋಗ್ಯವಂತರಾಗಿರುತ್ತಿದ್ದರು. ಮಡಿಕೆ, ಕುಡಿಕೆ ಬಳಸುವ ಮೂಲಕ ಕುಂಬಾರಿಕೆ ವೃತ್ತಿಯನ್ನು ಉತ್ತೇಜಿಸಿದಂತೆ ಆಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸುಳ್ಳು, ಮೋಸ, ಭ್ರಷ್ಟಾಚಾರದ ರಾಜಕಾರಣ ಜಾಸ್ತಿಯಾಗಿದೆ ಸಾವಯವ ರಾಜಕಾರಣದ ಚಿಂತನೆಯಡಿ ಬದಲಾವಣೆಗೆ ನಾವು ಎಲ್ಲರೂ ಪ್ರಯತ್ನ ಮಾಡಲಾಗುತ್ತಿದೆ. ಸಕರಾತ್ಮಕ ಆಲೋಚನೆಗಳಿಂದ ರಾಜಕಾರಣವನ್ನು ಕಟ್ಟುವ ಕೆಲಸ ಆಗಬೇಕಿದೆ ಬಹುತೇಕರಲ್ಲಿ ಇವತ್ತಿನ ರಾಜಕಾರಣದ ಬಗ್ಗೆ ಬೇಸರವಿದೆ. ಬದ್ಧತೆಯುಳ್ಳ ರಾಜಕಾರಣದ ಅಗತ್ಯವಿದೆ ಎಂಬ ಮನಸಿದೆ. ಹೃದಯಕ್ಕೆ ಬೇಕಾದ ರಾಜಕಾರಣವನ್ನು ಜನರು ಆಯ್ಕೆ ಮಾಡಿಕೊಳ್ಳಬೇಕಿದ್ದು, ಕೆಟ್ಟದನ್ನು ದೂರ ಮಾಡಬೇಕು ಇದಕ್ಕೆ ಜನರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಹಾಗೂ ಕುಂಬಾರ ಸಮುದಾಯದ ಮುಖಂಡ ಡಾ.ಕೆ.ನಾಗರಾಜ್ ಮಾತನಾಡಿ ಇತ್ತೀಚೆಗೆ ಅಲ್ಯೂಮಿನಿಯಂ, ಸ್ಟೀಲ್‌ ಪಾತ್ರೆಗಳ ಹಾವಳಿಯಿಂದಾಗಿ ವಂಶಪಾರಂಪರ್ಯವಾಗಿ ಕುಲಕಸುಬಾಗಿ ಮಾಡಿಕೊಂಡು ಬಂದಿರುವ ಕುಂಬಾರಿಕೆ ವೃತ್ತಿಗೆ ತೊಡಕುಂಟಾಗುತ್ತಿದೆ. ಮಣ್ಣಿನ ಪಾತ್ರೆಯಲ್ಲಿ ಬೇಯಿಸಿದ ಬಗೆ ಬಗೆಯ ಪದಾರ್ಥಗಳು ಹೆಚ್ಚು ರುಚಿಕರ ಹಾಗೂ ಆರೋಗ್ಯಕ್ಕೂ ಪೂರಕವಾಗಿತ್ತು. ಅಂದಿನ ದಿನಗಳಲ್ಲಿ ಮಣ್ಣಿನಿಂದ ಮಾಡಿದ ಉತ್ಪನ್ನಗಳಿಗೆ ಎಲ್ಲಿಲ್ಲದ ಬೇಡಿಕೆಯಿತ್ತು. ಪ್ರಸ್ತುತ ಬಹುತೇಕ ಜನರು ಅಲ್ಯೂಮಿನಿಯಂ, ಸ್ಟೀಲ್‌ ಪಾತ್ರೆ ಖರೀದಿಗೆ ಮಾರುಹೋಗುತ್ತಿದ್ದಾರೆ. ಆದರೂ ಕಲ್ಲಂಡೂರು ಗ್ರಾಮದ ಕ್ಲಸ್ಟರ್ ನಲ್ಲಿ ಮಣ್ಣಿನಲ್ಲಿ ಮಡಕೆ ಲೋಟ ಇತ್ಯಾದಿ ತಯಾರಿಸುವ ಕುಂಬಾರ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಾ ಇದ್ದೇವೆ ಎಂದರು.

ಸಮಾಜದಲ್ಲಿ ದಿನದಿಂದ ದಿನಕ್ಕೆ ಕುಂಬಾರ ವೃತ್ತಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮುದಾಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ಬಳಸಿಕೊಂಡು ಸ್ವಾವಲಂಬನೆ ಸಾಧಿಸುವಂತೆ ಆಗಬೇಕು ಮಣ್ಣಿನಿಂದ ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ವ್ಯವಸ್ಥೆ ಸಹ ಮಾಡಲಾಗುತ್ತದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶಶಿಕುಮಾರ್ ಗೌಡ, ಸೂರ್ಯಪ್ರಕಾಶ್ ಮಹಡಿ, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಎಂ.ಡಿ ಕಲಾವತಿ, ಉಪಾಧ್ಯಕ್ಷೆ ಶಾಂತಕುಮಾರಿ,  ರೈತ ಘಟಕದ ಅಧ್ಯಕ್ಷ ಡಿ.ಕೆ ಶ್ರೀನಿವಾಸ್, ಮುಖಂಡರಾದ ಚಂದ್ರಶೇಖರ್, ಪ್ರಭು, ಗಂಗರಾಜು, ಮುಂತಾದವರು ಇದ್ದರು

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

18 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago