ಮಣ್ಣಿನಿಂದ ತಯಾರಿಸಿದ ವಸ್ತುಗಳಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಜೊತೆಗೆ ಪರಿಸರಕ್ಕೂ ಪ್ರಯೋಜನಕಾರಿ ಹೆಚ್ಚಾಗಿ ಮಣ್ಣಿನ ವಸ್ತುಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಜೆಡಿಯು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ತಿಳಿಸಿದರು.
ತಾಲೂಕಿನ ಕಲ್ಲಂಡೂರು ಗ್ರಾಮದಲ್ಲಿನ ಡಾ.ಕೆ.ನಾಗರಾಜ್ ಅವರ ಪ್ರೋಟರಿ ಕ್ಲಸ್ಟರ್ ಗೆ ಮಂಗಳವಾರ ಭೇಟಿ ನೀಡಿ ಮಣ್ಣಿನಿಂದ ತಯಾರಿಸಿದ ವಸ್ತುಗಳನ್ನು ವೀಕ್ಷಿಸಿ ಮಾತನಾಡಿದ ಅವರು ಪ್ಲಾಸ್ಟಿಕ್ ಹಾಗೂ ಗಾಜಿನಿಂದ ತಯಾರಿಸಿದ ಲೋಟ, ತಟ್ಟೆಗಳಲ್ಲಿ ವಿಷಕಾರಿ ರಾಸಾಯನಿಕ ಅಂಶವಿರುತ್ತದೆ. ಈ ಅಂಶವು ನಮಗೆ ಗೊತ್ತಿಲ್ಲದೆ ಊಟದ ಜತೆ ದೇಹ ಸೇರಿ ಆರೋಗ್ಯ ಕೆಡಿಸುತ್ತದೆ. ಪೂರ್ವಜರು ಮಣ್ಣಿನಿಂದ ಮಾಡಿದ ಮಡಿಕೆ, ಕುಡಿಕೆಗಳನ್ನೇ ಪಾತ್ರೆಗಳಾಗಿ ಬಳಸಿ ಆರೋಗ್ಯವಂತರಾಗಿರುತ್ತಿದ್ದರು. ಮಡಿಕೆ, ಕುಡಿಕೆ ಬಳಸುವ ಮೂಲಕ ಕುಂಬಾರಿಕೆ ವೃತ್ತಿಯನ್ನು ಉತ್ತೇಜಿಸಿದಂತೆ ಆಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಳ್ಳು, ಮೋಸ, ಭ್ರಷ್ಟಾಚಾರದ ರಾಜಕಾರಣ ಜಾಸ್ತಿಯಾಗಿದೆ ಸಾವಯವ ರಾಜಕಾರಣದ ಚಿಂತನೆಯಡಿ ಬದಲಾವಣೆಗೆ ನಾವು ಎಲ್ಲರೂ ಪ್ರಯತ್ನ ಮಾಡಲಾಗುತ್ತಿದೆ. ಸಕರಾತ್ಮಕ ಆಲೋಚನೆಗಳಿಂದ ರಾಜಕಾರಣವನ್ನು ಕಟ್ಟುವ ಕೆಲಸ ಆಗಬೇಕಿದೆ ಬಹುತೇಕರಲ್ಲಿ ಇವತ್ತಿನ ರಾಜಕಾರಣದ ಬಗ್ಗೆ ಬೇಸರವಿದೆ. ಬದ್ಧತೆಯುಳ್ಳ ರಾಜಕಾರಣದ ಅಗತ್ಯವಿದೆ ಎಂಬ ಮನಸಿದೆ. ಹೃದಯಕ್ಕೆ ಬೇಕಾದ ರಾಜಕಾರಣವನ್ನು ಜನರು ಆಯ್ಕೆ ಮಾಡಿಕೊಳ್ಳಬೇಕಿದ್ದು, ಕೆಟ್ಟದನ್ನು ದೂರ ಮಾಡಬೇಕು ಇದಕ್ಕೆ ಜನರ ಸಹಕಾರ ಮುಖ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಹಾಗೂ ಕುಂಬಾರ ಸಮುದಾಯದ ಮುಖಂಡ ಡಾ.ಕೆ.ನಾಗರಾಜ್ ಮಾತನಾಡಿ ಇತ್ತೀಚೆಗೆ ಅಲ್ಯೂಮಿನಿಯಂ, ಸ್ಟೀಲ್ ಪಾತ್ರೆಗಳ ಹಾವಳಿಯಿಂದಾಗಿ ವಂಶಪಾರಂಪರ್ಯವಾಗಿ ಕುಲಕಸುಬಾಗಿ ಮಾಡಿಕೊಂಡು ಬಂದಿರುವ ಕುಂಬಾರಿಕೆ ವೃತ್ತಿಗೆ ತೊಡಕುಂಟಾಗುತ್ತಿದೆ. ಮಣ್ಣಿನ ಪಾತ್ರೆಯಲ್ಲಿ ಬೇಯಿಸಿದ ಬಗೆ ಬಗೆಯ ಪದಾರ್ಥಗಳು ಹೆಚ್ಚು ರುಚಿಕರ ಹಾಗೂ ಆರೋಗ್ಯಕ್ಕೂ ಪೂರಕವಾಗಿತ್ತು. ಅಂದಿನ ದಿನಗಳಲ್ಲಿ ಮಣ್ಣಿನಿಂದ ಮಾಡಿದ ಉತ್ಪನ್ನಗಳಿಗೆ ಎಲ್ಲಿಲ್ಲದ ಬೇಡಿಕೆಯಿತ್ತು. ಪ್ರಸ್ತುತ ಬಹುತೇಕ ಜನರು ಅಲ್ಯೂಮಿನಿಯಂ, ಸ್ಟೀಲ್ ಪಾತ್ರೆ ಖರೀದಿಗೆ ಮಾರುಹೋಗುತ್ತಿದ್ದಾರೆ. ಆದರೂ ಕಲ್ಲಂಡೂರು ಗ್ರಾಮದ ಕ್ಲಸ್ಟರ್ ನಲ್ಲಿ ಮಣ್ಣಿನಲ್ಲಿ ಮಡಕೆ ಲೋಟ ಇತ್ಯಾದಿ ತಯಾರಿಸುವ ಕುಂಬಾರ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಾ ಇದ್ದೇವೆ ಎಂದರು.
ಸಮಾಜದಲ್ಲಿ ದಿನದಿಂದ ದಿನಕ್ಕೆ ಕುಂಬಾರ ವೃತ್ತಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮುದಾಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ಬಳಸಿಕೊಂಡು ಸ್ವಾವಲಂಬನೆ ಸಾಧಿಸುವಂತೆ ಆಗಬೇಕು ಮಣ್ಣಿನಿಂದ ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ವ್ಯವಸ್ಥೆ ಸಹ ಮಾಡಲಾಗುತ್ತದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶಶಿಕುಮಾರ್ ಗೌಡ, ಸೂರ್ಯಪ್ರಕಾಶ್ ಮಹಡಿ, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಎಂ.ಡಿ ಕಲಾವತಿ, ಉಪಾಧ್ಯಕ್ಷೆ ಶಾಂತಕುಮಾರಿ, ರೈತ ಘಟಕದ ಅಧ್ಯಕ್ಷ ಡಿ.ಕೆ ಶ್ರೀನಿವಾಸ್, ಮುಖಂಡರಾದ ಚಂದ್ರಶೇಖರ್, ಪ್ರಭು, ಗಂಗರಾಜು, ಮುಂತಾದವರು ಇದ್ದರು
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…