ಮತಗಳ್ಳತನ ವಿಚಾರ: ಸಿಎಂ ಸಿದ್ದರಾಮಯ್ಯ ಏನಂದ್ರು… ಗೊತ್ತಾ…?

 

ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ.
ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು ಎನ್ನುವುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಬಿಡುಗಡೆ ಮಾಡಿರುವ ದಾಖಲೆಗಳು ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸರ್ಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲಾ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ದಾಖಲೆಗಳನ್ನು ರಾಹುಲ್‌ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸುದೀರ್ಘ 6 ತಿಂಗಳ ಕಾಲ ಹಲವು ಮಂದಿ ಅಧ್ಯಯನ ನಡೆಸಿ, ಮತಗಳ್ಳತನದ ಇಂಚಿಂಚೂ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಕೇವಲ ಮೂರುವರೆ ಲಕ್ಷ ಮತದಾರರಿರುವ ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷದ 250 ಮತಗಳನ್ನು ಅಕ್ರಮವಾಗಿ ಪಡೆದುಕೊಂಡು ಚುನಾವಣೆಯಲ್ಲಿ ಜಯಿಸಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 5 ರೀತಿಯಲ್ಲಿ ಚುನಾವಣಾ ಅಕ್ರಮ ಎಸಗಲಾಗಿದೆ ಎಂದರು.

1. ನಕಲಿ ಮತದಾರರು:
ಒಟ್ಟು 11,965 ಮಂದಿ ನಕಲಿ ಮತದಾರರು ಈ ಕ್ಷೇತ್ರದಲ್ಲಿ ಮತಚಲಾವಣೆ ಮಾಡಿದ್ದಾರೆ. ಒಬ್ಬನೇ ಮತದಾರ ನಾಲ್ಕಾರು ಮತಗಟ್ಟೆಗಳಲ್ಲಿ ಮತ ಚಲಾಯಿಸಿರುವುದು, ಒಬ್ಬನೇ ಮತದಾರ ಈ ಕ್ಷೇತ್ರದ ಜೊತೆ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕೂಡ ಮತ ಚಲಾವಣೆ ಮಾಡಿರುವುದು. ಹೀಗೆ ಮತದಾನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ.

2. ನಕಲಿ ವಿಳಾಸ ಹೊಂದಿರುವ ಮತದಾರರು:
ಒಟ್ಟು 40,009 ಮಂದಿ ನಕಲಿ ವಿಳಾಸ ಹೊಂದಿರುವ ಮತದಾರರನ್ನು ಈ ಕ್ಷೇತ್ರದಲ್ಲಿ ಪತ್ತೆ ಮಾಡಲಾಗಿದೆ. ಮನೆಯ ನಂಬರ್‌ ‘0’ ಎಂದು ನಮೂದಾಗಿರುವ ಸಾವಿರಾರು ವಿಳಾಸವೇ ಇಲ್ಲದ ಮತದಾರರು, ತಂದೆ ಮತ್ತು ಪತಿಯ ಹೆಸರು ಇರುವ ಜಾಗದಲ್ಲಿ ಅರ್ಥವೇ ಇಲ್ಲದಂತೆ ಮನಸೋಇಚ್ಛೆ ಇಂಗ್ಲೀಷ್‌ ಅಕ್ಷರಗಳನ್ನು ನಮೂದಿಸಿರುವುದು ಮತ್ತು ಅಸ್ತಿತ್ವದಲ್ಲಿ ಇಲ್ಲದ ವಿಳಾಸಗಳನ್ನು ನೀಡಿರುವುದು. ಹೀಗೆ ನಕಲಿ ವಿಳಾಸ ನೀಡಿ ಮತಗಳ್ಳತನ ನಡೆಸಲಾಗಿದೆ.

3. ಒಂದೇ ವಿಳಾಸದಲ್ಲಿ ನೂರಾರು ಮಂದಿ ಮತದಾರರ ವಾಸ:
ಒಟ್ಟು 10,452 ಮಂದಿ ಮತದಾರರು ಎಲ್ಲರೂ ಒಟ್ಟಿಗೆ ಬೆರಳೆಣಿಕೆಯಷ್ಟು ಸಂಖ್ಯೆಯ ವಿಳಾಸದಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ. ಸಿಂಗಲ್‌ ಬೆಡ್‌ ರೂಂ ಮನೆಯ ವಿಳಾಸ ನೀಡಿ 80 ಜನ ಮತದಾರರ ಗುರುತಿನ ಚೀಟಿ ಪಡೆದಿದ್ದಾರೆ. 68 ಮಂದಿ ಮತದಾರರ ಗುರುತಿನ ಚೀಟಿಯಲ್ಲಿ ಒಂದು ಖಾಸಗಿ ಕ್ಲಬ್‌ ನ ವಿಳಾಸವಿದೆ. ಈ ಬಗ್ಗೆ ಅಲ್ಲಿ ವಿಚಾರಣೆ ನಡೆಸಿದಾಗ ಗುರುತಿನ ಚೀಟಿ ಹೊಂದಿರುವ ಯಾರೊಬ್ಬರೂ ಅಲ್ಲಿ ವಾಸವಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಲಾಗಿದೆ.

4. ಗುರುತು ಹಿಡಿಯಲು ಸಾಧ್ಯವೇ ಇಲ್ಲದಂತಹ ಮತದಾರರ ಫೋಟೋಗಳು:
ಒಟ್ಟು ಈ ಕ್ಷೇತ್ರದಲ್ಲಿ 4,132 ಮಂದಿಯ ಗುರುತಿನ ಚೀಟಿಯಲ್ಲಿ ಫೋಟೋಗಳೇ ಲಭ್ಯವಿಲ್ಲ ಅಥವಾ ಫೋಟೋಗಳನ್ನು ಗುರುತಿಸಲು ಸಾಧ್ಯವಾಗದಂತೆ ಅತ್ಯಂತ ಚಿಕ್ಕದಾಗಿ ನಮೂದಿಸಲಾಗಿದೆ. ಅಂದರೆ ಗುರುತೇ ಹಿಡಿಯಲಾಗದವರು ಕೂಡ ಮತದಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

5. ಫಾರ್ಮ್‌ 6 ರಡಿ ಮೊದಲ ಬಾರಿಗೆ ಮತ ಚಲಾಯಿಸಿದ ವಯೋವೃದ್ಧರು:
ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡ 33,692 ಮಂದಿಯ ವಯಸ್ಸು 60 ರಿಂದ 90 ವರ್ಷಕ್ಕೂ ಮೇಲ್ಪಟ್ಟಿದೆ. ಹೊಸ ಅಥವಾ ಯುವ ಮತದಾರರು ನರೇಂದ್ರ ಮೋದಿಗೆ ಮತ ನೀಡುತ್ತಾರೆ ಎಂಬ ಮಾತನ್ನು ಆಗಾಗ್ಗೆ ಬಿಜೆಪಿಯವರೇ ಹೇಳುತ್ತಿರುತ್ತಾರೆ. ವಾಸ್ತವದಲ್ಲಿ 98 ವರ್ಷ, 89 ವರ್ಷದ ವಯೋವೃದ್ಧರು ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡಿರುವುದು ಈ ಹಗರಣದ ಆಳ, ಅಗಲವನ್ನು ತೋರಿಸುತ್ತದೆ ಎಂದರು.

ರಾಹುಲ್‌ ಗಾಂಧಿ ಅವರು ಕೇಳಿದ ಮತದಾರರ ಎಲೆಕ್ಟ್ರಾನಿಕ್ ಮಾಹಿತಿ ಮತ್ತು ಸಿಸಿ ಟಿವಿ ದಾಖಲೆಗಳನ್ನು ನೀಡಿ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಂಡಿದ್ದರೆ ಈ ಹಗರಣವನ್ನು ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸಲು ಸಾಧ್ಯವಿತ್ತು. ಮಾಹಿತಿ ಮುಚ್ಚಿಡುವ ಏಕೈಕ ಉದ್ದೇಶದೊಂದಿಗೆ ಚುನಾವಣಾ ಆಯೋಗವು ತನ್ನ ನಿಯಮಗಳನ್ನು ಮನಸ್ಸಿಗೆ ಬಂದಂತೆ ತಿದ್ದುಪಡಿ ಮಾಡಿಕೊಂಡಿದೆ. ಇದು ಮಹದೇವಪುರ ಕ್ಷೇತ್ರಕ್ಕೆ ಸೀಮಿತವಾದ ಹಗರಣವಲ್ಲ, ಇಡೀ ದೇಶದಲ್ಲೇ ಇದೇ ಮಾದರಿಯ ಮತಗಳ್ಳತನ ಮಾಡಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಉಳಿದಿಲ್ಲ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago