ಭಾರತ ಚುನಾವಣಾ ಆಯೋಗವು ಮೇ.10ರ ಬುಧವಾರದಂದು ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನ ನಿಗದಿಪಡಿಸಿದೆ.
ಮೇ 10 ರಂದು ರಾಜ್ಯಾದ್ಯಾಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ)ರನ್ವಯ ಅರ್ಹ ಮತದಾನರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮೇ 10 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವುದು.
ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಸೂಚಿಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…