ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ ನಿಗದಿಯಾಗಿರುತ್ತದೆ.
ಈ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ-03ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗಿರುತ್ತದೆ, ಆದ್ದರಿಂದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ಏಪ್ರಿಲ್ 26 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದೆ.
ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ-03ಎ ಹಾಗೂ 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಏಪ್ರೀಲ್ 26 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಪೋಷಿಸಬೇಕು ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…
ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…