ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ ನಿಗದಿಯಾಗಿರುತ್ತದೆ.
ಈ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ-03ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗಿರುತ್ತದೆ, ಆದ್ದರಿಂದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ಏಪ್ರಿಲ್ 26 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದೆ.
ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ-03ಎ ಹಾಗೂ 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಏಪ್ರೀಲ್ 26 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಪೋಷಿಸಬೇಕು ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…