ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ ಆದೇಶ

ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ ನಿಗದಿಯಾಗಿರುತ್ತದೆ.

ಈ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ-03ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗಿರುತ್ತದೆ, ಆದ್ದರಿಂದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ಏಪ್ರಿಲ್ 26 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದೆ.

ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ-03ಎ ಹಾಗೂ 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಏಪ್ರೀಲ್ 26 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಪೋಷಿಸಬೇಕು ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

9 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

13 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

16 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago