ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ ನಿಗದಿಯಾಗಿರುತ್ತದೆ.
ಈ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ-03ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗಿರುತ್ತದೆ, ಆದ್ದರಿಂದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ಏಪ್ರಿಲ್ 26 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದೆ.
ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ-03ಎ ಹಾಗೂ 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಏಪ್ರೀಲ್ 26 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಪೋಷಿಸಬೇಕು ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…