ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,

ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ‌ಡಾ‌.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು‌.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.

ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

7 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

7 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

11 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

13 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

16 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

21 hours ago