ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,

ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ‌ಡಾ‌.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು‌.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.

ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

21 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago