ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,

ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ‌ಡಾ‌.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು‌.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.

ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

2 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

2 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

3 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

5 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

10 hours ago