ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,

ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ‌ಡಾ‌.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು‌.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.

ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

9 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

17 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

22 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago