ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,

ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ‌ಡಾ‌.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು‌.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.

ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

5 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

6 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

7 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

10 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

10 hours ago