ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,
ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.
ಜಿಪಂ ಉಪಕಾರ್ಯದರ್ಶಿ ಡಾ.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು.
ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.
ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…