ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,

ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ‌ಡಾ‌.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು‌.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.

ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

3 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

6 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

8 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

23 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago